ಶಹಾಪುರ ತಹಶೀಲ್ದಾರ್ ಮಧುರಾಜ್ 
ರಾಜ್ಯ

ಯಾದಗಿರಿ: ಕಲುಷಿತ ನೀರು ಕುಡಿದು ಓರ್ವ ಸಾವು, 37 ಮಂದಿ ಅಸ್ವಸ್ಥ

ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‌ಪೇಟ್ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‌ಪೇಟ್ ಗ್ರಾಮದಲ್ಲಿ ನಡೆದಿದೆ. 

ಮೃತ ವ್ಯಕ್ತಿಯನ್ನು ಹೊನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಶನಿವಾರದಿಂದ ಇಲ್ಲಿಯವರೆಗೆ ಹೊಟ್‌ಪೇಟೆ ಗ್ರಾಮದಲ್ಲಿ 37 ಪ್ರಕರಣಗಳು ವರದಿಯಾಗಿವೆ. ಆದರೆ ವೈದ್ಯಕೀಯ ವರದಿ ಪ್ರಕಾರ ಹೊನ್ನಪ್ಪ ಗೌಡ ಸಾವಿಗೆ ಕಲುಷಿತ ನೀರು ಸೇವನೆಯ ಜೊತೆಗೆ ಬೇರೆ ಕಾರಣಗಳೂ ಇವೆ ಎಂದು ಹೇಳಿದ್ದಾರೆ. ಕಳೆದ ಮೂರು ದಿನಗಳಲ್ಲಿ ಗ್ರಾಮದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಅವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂದು ಸಂಬಂಧವಿಲ್ಲ ಎಂದು ಶಹಾಪುರ ತಹಶೀಲ್ದಾರ್ ಮಧುರಾಜ್ ಹೇಳಿದ್ದಾರೆ.

ಭಾನುವಾರ ಹೊಟ್‌ಪೇಟ್‌ ಗ್ರಾಮಕ್ಕೆ ಭೇಟಿ ನೀಡಿದ್ದೆ. ಈ ವೇಳೆ ಗ್ರಾಮದ ನಿವಾಸಿಗಳು ಕೆಲ ಪೈಪ್‌ಗಳು ಹಾಳಾಗಿದ್ದರಿಂದ ಮಳೆ ನೀರು, ಚರಂಡಿ ನೀರು ಕುಡಿಯುವ ನೀರನ್ನು ಸೇರಿಕೊಂಡಿದೆ ಎಂದು ಗ್ರಾಮದ ನಿವಾಸಿಗಳು ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ. 

ಈ ನಡುವೆ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ ಕೂಡ ಹಲವು ತಿಂಗಳಿಂದ ಸ್ವಚ್ಛಗೊಳಿಸಿಲ್ಲ ಎಂಬ ಮಾತುಗಳು ಗ್ರಾಮಸ್ಥರಿಂದ ಕೇಳಿಬರುತ್ತಿದೆ. 

ಬೆಳೆಗಳಿಗೆ ಕೀಟನಾಶಕ ಸಿಂಪಡಿಸುವ ಸಮಯದಲ್ಲಿ ಆ ಗಾಳಿಯನ್ನು ಉಸಿರಾಡಿದಾಗಲೂ ಜನರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಗಳಿರುತ್ತವೆ. ಹೊಟ್‌ಪೇಟ್‌ನಲ್ಲಿರುವ ಪಿಎಚ್‌ಸಿ ಉಪ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 31 ಮಂದಿ ಈಗಾಗಲೇ ಬಿಡುಗಡೆಯಾಗಿದ್ದು, ಇನ್ನೂ 6 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ವೈದ್ಯರ ತಂಡ ಮತ್ತು ಆಂಬ್ಯುಲೆನ್ಸ್ ಅನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

15 ದಿನಗಳ ಹಿಂದೆಯಷ್ಟೇ ಜೇವರ್ಗಿ ತಾಲೂಕಿನ (ಕಲಬುರಗಿ ಜಿಲ್ಲೆ) ಮಂದೇವಾಳ ಗ್ರಾಮದ 23 ಮಂದಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದರು. ಇದೇ ಕಾರಣಕ್ಕೆ ಜೂನ್‌ನಲ್ಲಿ ರಾಯಚೂರು ನಗರದಲ್ಲಿ ಐವರು ಸಾವನ್ನಪ್ಪಿ, ಹಲವರು ಅಸ್ವಸ್ಥರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

SCROLL FOR NEXT