ಮೃತ ಯುವತಿ ಅಖಿಲಾ ಸೋಮಶೇಖರ್. 
ರಾಜ್ಯ

ಕುಟುಂಬದ ದೀಪ ನಂದಿಸಿದ ಬೆಸ್ಕಾಂ ನಿರ್ಲಕ್ಷ್ಯ!

ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತಗುಲಿ 23 ವರ್ಷದ ಯುವತಿ ಸಾವನ್ನಪ್ಪಿದ್ದು, ಯುವತಿಯ ಈ ಸಾವು ಇದೀಗ ಆಕೆಯ ಕುಟುಂಬದ ದೀಪವನ್ನೇ ಆರಿಸಿದೆ.

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತಗುಲಿ 23 ವರ್ಷದ ಯುವತಿ ಸಾವನ್ನಪ್ಪಿದ್ದು, ಯುವತಿಯ ಈ ಸಾವು ಇದೀಗ ಆಕೆಯ ಕುಟುಂಬದ ದೀಪವನ್ನೇ ಆರಿಸಿದೆ. 

ಕಳೆದ ತಿಂಗಳು ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರ ಬಳಿ ದುರ್ಘಟನೆ ಸಂಭವಿಸಿತ್ತು. ಘಟನೆಯಲ್ಲಿ ಅಖಿಲಾ ಸೋಮಶೇಖರ್ ಎಂಬ ಯುವತಿ ಸಾವನ್ನಪ್ಪಿದ್ದಳು. 

ಯುವತಿಯ ತಂದೆ ನಿವೃತ್ತ ತೋಟಗಾರನಾಗಿದ್ದಾರೆ. 2 ವರ್ಷಗಳ ಕೋವಿಡ್ ಸಾಂಕ್ರಾಮಿಕ ರೋಗದ ಬಳಿಕ ಮೊದಲ ಬಾರಿಗೆ ಮನೆಯಲ್ಲಿ ಅದ್ದೂರಿಯಾಗಿ ದೀಪಾವಳಿ ಆಚರಿಸಲು ಸಿದ್ಧತೆ ನಡೆಸಿದ್ದೆವು. ಅಷ್ಟರಲ್ಲಾಗಲೇ ದುರಂತ ಸಂಭವಿಸಿತು ಎಂದು ಯುವತಿಯ ತಂದೆ ಸೋಮಶೇಖರ್ ಹೇಳಿದ್ದಾರೆ. 

ಬಿ.ಕಾಂ ಪೂರ್ಣಗೊಳಿಸಿದ್ದ ಅಖಿಲಾ ಸಂಗೀತ ಶಾಲೆಯಲ್ಲಿ ಕೆಲಸಕ್ಕೆ ಸೇರಿ ಕುಟುಂಬವನ್ನು ಸಲಹುತ್ತಿದ್ದಳು. ಕುಟುಂಬದಲ್ಲಿ ದುಡಿಯುವ ಏಕೈಕ ಕೈ ಎಂದರೆ ಅದು ಅಖಿಲಾ ಆಗಿದ್ದರು. ಆದರೆ, ಇದೀಗ ಅಖಿಲಾ ಅವರನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. 

ಅಖಿಲಾ ಅವರ ಸಹೋದರ ಅಂಗವಿಕಲನಾಗಿದ್ದು, ಸಹೋದರನಿಗೆ ಶಿಕ್ಷಣ ಕೊಡಿಸುವ ಜವಾಬ್ದಾರಿಯನ್ನು ಅಖಿಲಾ ಹೊತ್ತುಕೊಂಡಿದ್ದರು. ಇದೀಗ ಆಕೆಯನ್ನು ಕಳೆದುಕೊಂಡಿರುವ ನಮಗೆ ದೀಪಾವಳಿ ಆಚರಿಸುವ ಮನಸ್ಸಿಲ್ಲ. ನೋವು ಮರೆಯಲು ಇನ್ನೂ ಬಹಳಷ್ಟು ಸಮಯ ಬೇಕು ಎಂದು ಸೋಮಶೇಖರ್ ತಿಳಿಸಿದ್ದಾರೆ. 

ಬಳಿಕ ದುರಂತವನ್ನು ಸ್ಮರಿಸಿದ ಅವರು, ಸೆಪ್ಟೆಂಬರ್ 5 ರಂದು ಪೊಲೀಸರಿಂದ ದೂರವಾಣಿ ಕರೆ ಬಂದಿತ್ತು. ನೀವು ನೀಡಿದ ದೂರಿನ ಆಧಾರದ ಮೇಲೆ ಜಾಹಿರಾತು ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳದ ಬೆಸ್ಕಾಂ ವಿರುದ್ಧ ಪ್ರಕರಣ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು. 

ಸ್ಕೂಟರ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ಮಗಳಿಗೆ ನೀರು ತುಂಬಿದ ರಸ್ತೆ ಎದುರಾಗಿದೆ. ಈ ವೇಳೆ ಮುಂದೆ ಸಾಗಲು ನೀರಿನಲ್ಲಿ ಕಾಲನ್ನು ಕೆಳಗೆ ಬಿಟ್ಟಿದ್ದಾಳೆ. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಮಗಳ ಸಾವಿನ ಜವಾಬ್ದಾರಿಯನ್ನು ಕೇಬಲ್ ವೈರ್ ಬಿಟ್ಟಿದ್ದ ಜಾಹೀರಾತು ಸಂಸ್ಥೆ ಹೊತ್ತುಕೊಂಡಿದೆ. ಜಾಹೀರಾತು ಸಂಸ್ಥೆ ಪರಿಹಾರವಾಗಿ ರೂ.20 ಲಕ್ಷ ಚೆಕ್ ನೀಡಿದೆ. ಬಿಬಿಎಂಪಿಯಿಂದ ಇನ್ನೂ ಯಾವುದೇ ಪರಿಹಾರಗಳೂ ಬಂದಿಲ್ಲ. ನನಗೆ ಹಣ ಸಿಗಬಹುದು. ಆದರೆ ಹೋದ ನನ್ನ ಮಗಳು ಮರಳಿ ಬರುವುದಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT