ಸಂಗ್ರಹ ಚಿತ್ರ 
ರಾಜ್ಯ

ಕೊಡಗಿನಲ್ಲೂ ಆಫ್ರಿಕನ್‌ ಹಂದಿ ಜ್ವರ ಪತ್ತೆ; ಜಾನುವಾರು ಜಾತ್ರೆ, ಸಂತೆ ನಿಷೇಧ

ವಿದೇಶಗಳಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ಆಫ್ರಿಕನ್‌ ಹಂದಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಕೊಡಗಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಸೋಂಕು ವರದಿಯಾಗಿದೆ.

ಮಡಿಕೇರಿ: ವಿದೇಶಗಳಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ಆಫ್ರಿಕನ್‌ ಹಂದಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಕೊಡಗಿನಲ್ಲಿ  ಆಫ್ರಿಕನ್‌ ಹಂದಿ ಜ್ವರ ಸೋಂಕು ವರದಿಯಾಗಿದೆ.

ಚರ್ಮಗಂಟು ಖಾಯಿಲೆ ವ್ಯಾಪಕವಾಗಿರುವ ಹೊತ್ತಿನಲ್ಲೇ ಕೊಡಗಿನಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದ್ದು, ತಾಲ್ಲೂಕಿನ ಗಾಳಿಬೀಡು ಗ್ರಾಮದಲ್ಲಿ ಬಿ.ಸಿ.ಗಣೇಶ ಎಂಬುವರು ನಡೆಸುತ್ತಿದ್ದ ಹಂದಿ ಫಾರಂನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಜ್ವರ ಪತ್ತೆಯಾಗಿರುವ ಫಾರಂನಲ್ಲಿದ್ದ ಎಲ್ಲ 10 ಹಂದಿಗಳೂ ಮೃತಪಟ್ಟಿವೆ ಎಂದು ಮೂಲಗಳು ತಿಳಿಸಿವೆ.

ಕೊಡಗು ಜಿಲ್ಲಾಧಿಕಾರಿ ಸತೀಶ ಬಿ.ಸಿ ಅವರು ಜಾನುವಾರು ರೋಗ ನಿಗಾ ಸಮಿತಿಯ ತಂಡವನ್ನು ಸ್ಥಳಕ್ಕೆ ಕಳುಹಿಸಿದ್ದು, ರೋಗ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಈಗಾಗಲೇ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಒಂದು ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗಪೀಡಿತ ವಲಯ ಎಂದು ಘೋಷಿಸಿದ್ದು, ಇಲ್ಲೆಲ್ಲ ತಪಾಸಣೆ ನಡೆಸಿದ್ದು, ಎಲ್ಲೂ ಹಂದಿಗಳು ಕಂಡು ಬಂದಿಲ್ಲ. ಇಲ್ಲಿಂದ 10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಿಸಿದ್ದು, ಹಂದಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಇಲ್ಲಿನ ಹಂದಿ ಸಾಕಾಣಿಕೆದಾರರು ಹೊಸದಾಗಿ ಹಂದಿಗಳನ್ನು ಖರೀದಿಸಬಾರದು, ಇಲ್ಲಿ ಕೆಲಸ ಮಾಡುವವರು ಬೇರೆ ಫಾರಂಗಳಿಗೆ ಹೋಗಬಾರದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪಶುಪಾಲನಾ ಇಲಾಖೆ ಅಧಿಕಾರಿಗಳು ‘ಆಫ್ರಿಕನ್ ಹಂದಿ ಜ್ವರ ಅಕ್ಟೋಬರ್ 3ರಂದು ಪತ್ತೆಯಾದ ಫಾರಂನಲ್ಲಿರುವ ಎಲ್ಲ ಹಂದಿಗಳೂ ಸತ್ತಿವೆ. ಒಂದು ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲೂ ಫಾರಂಗಳು ಇಲ್ಲ. ಮುನ್ನಚ್ಚರಿಕಾ ಕ್ರಮವಾಗಿ ಅತೀವ ನಿಗಾ ವಹಿಸಲಾಗಿದೆ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿಂದರೆ ಮನುಷ್ಯರಿಗೆ ಈ ರೋಗ ಬರುವ ಸಾಧ್ಯತೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಜಾಗ್ರತಾ ಕ್ರಮ; ಜಾತ್ರೆ, ಸಂತೆ ನಿಷೇಧ
ಕೊಡಗು ಜಿಲ್ಲೆಯ ಗಡಿ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ ಹಾಗೂ ಹಾಸನಗಳಲ್ಲಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ಪತ್ತೆಯಾಗಿರುವುದರಿಂದ ಜಿಲ್ಲೆಯಲ್ಲೂ ಮುನ್ನಚ್ಚರಿಕೆ ವಹಿಸಲಾಗಿದೆ. ನವೆಂಬರ್ 21ರವರೆಗೂ ಜಿಲ್ಲೆಯಲ್ಲಿ ಜಾನುವಾರು ಸಂತೆ ಹಾಗೂ ಜಾನುವಾರು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಯಾವುದೇ ಜಾನುವಾರಿನಲ್ಲೂ ಚರ್ಮಗಂಟು ರೋಗ ಪತ್ತೆಯಾಗಿಲ್ಲದೇ ಇದ್ದರೂ ಮುನ್ನಚ್ಚರಿಕೆ ಕ್ರಮವಾಗಿ 10 ಸಾವಿರ ಡೋಸೆಜ್ ಆಡು ಸಿಡುಬಿನ ಲಸಿಕೆಯನ್ನು ತರಿಸಲಾಗಿದೆ. ಇವುಗಳನ್ನು ಗಡಿಭಾಗಗಳಾದ ಕುಶಾಲನಗರ, ಸೋಮವಾರಪೇಟೆ ತಾಲ್ಲೂಕುಗಳಿಗೆ ಹಂಚಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?