ಮಂಗಳೂರು (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದಲ್ಲಿ ಇದೇ ಮೊದಲು; ಹೊಸ ಕಾನೂನಿನ ಅಡಿ ಅಕ್ರಮ ಕಸಾಯಿಖಾನೆಗೆ ಬೀಗ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ-2020 ರ ಅಡಿಯಲ್ಲಿ ಈ ಅಕ್ರಮ ಕಸಾಯಿಖಾನೆ ಇದ್ದ ಮೂರು ಪ್ರದೇಶಗಳನ್ನು ವಶಕ್ಕೆ ಪಡೆದಿದ್ದಾರೆ.  ಕಳೆದ ವರ್ಷ ಕಾಯ್ದೆ ಜಾರಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಇಂತಹ ಕ್ರಮ ಜರುಗಿಸಲಾಗಿದೆ. 

ಕಾಟಿಪಳ್ಳದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಹಕೀಮ್ ಹಾಗೂ ಮೊಹಮ್ಮದ್ ಪರ್ವೇಜ್ ನಡೆಸುತ್ತಿದ್ದರು ಹಾಗೂ ಗಂಜಿಮಠದಲ್ಲಿ ಮನೆಯೊಂದಕ್ಕೆ ಹೊಂದಿಕೊಂಡಂತೆ ಇದ್ದ ಪ್ರದೇಶದಲ್ಲಿ ಯೂಸೂಫ್, ಹಕೀಮ್ ಹಾಗೂ ಸಿರಾಜ್ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದರು. ಅರ್ಕುಳದಲ್ಲಿ ಬತೀಷ್ ಎಂಬಾತ ಕಸಾಯಿಖಾನೆ ನಡೆಸುತ್ತಿದ್ದ. ಈ ಕಸಾಯಿಖಾನೆ ಹಾಗೂ ಅದಕ್ಕೆ ಸಂಬಂಧಿಸಿದ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. 

ಕೋರ್ಟ್ ಈ ಪ್ರಕರಣವನ್ನು ಇತ್ಯರ್ಥಪಡಿಸುವವರೆಗೂ ಕಸಾಯಿಖಾನೆಗಳಿದ್ದ ಕಟ್ಟಡದ ಮಾಲಿಕರು ಅದನ್ನು ಮಾರಾಟ ಮಾಡುವಂತಿಲ್ಲ ಎಂದು ಮಂಗಳೂರು ತಹಶಿಲ್ದಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT