ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಕೋಣನಕುಂಟೆಯಲ್ಲಿ ಗುರುವಾರ ನಡೆದಿದೆ.

ಬೆಂಗಳೂರು: ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಕೋಣನಕುಂಟೆಯಲ್ಲಿ ಗುರುವಾರ ನಡೆದಿದೆ. 

ಪ್ರಶಾಂತ್ ಸಿಂಗ್ (28) ಮೃತ ವ್ಯಕ್ತಿಯಾಗಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಮೃತ ಪ್ರಶಾಂತ್ ಮದ್ಯವ್ಯಸನಿಯಾಗಿದ್ದು, ಮದ್ಯ ಸೇವನೆಯನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಮನೆಯವರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ. ಸಾವನ್ನಪ್ಪಿದ ರಾತ್ರಿ ಕೂಡ ಕುಟುಂಬದ ಸದಸ್ಯರೊಂದಿಗೆ ಜಗಳವಾಡಿದ್ದಾನೆ. ಜಗಳದ ಬಳಿಕ ರೂಮಿಗೆ ಬಂದ ಪ್ರಶಾಂತ್ ಕಿಟಕಿಯಿಂದ ಜಿಗಿದಿದ್ದಾನೆಂದು ತಿಳಿದುಬಂದಿದೆ. 

ಘಟನೆ ಸಂಬಂಧ ವ್ಯಕ್ತಿಯ ಸಂಬಂಧಿ ಬ್ರಹ್ಮ ದೇವ್ ಸಿಂಗ್ ದೂರು ನೀಡಿದ್ದು, ದೂರು ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆದರೆ, ಕುಟುಂಬಸ್ಥರು ಮಾತ್ರ ಯಾರೊಬ್ಬರ ಮೇಲೂ ಆರೋಪ ಮಾಡಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಸಿಆರ್‌ಪಿಸಿಯ ಸೆಕ್ಷನ್ 174 ರ ಅಡಿಯಲ್ಲಿ ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಕಿಮ್ಸ್) ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT