ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನ ಬೈಜೂಸ್ ಪ್ರಧಾನ ಕಚೇರಿಯಲ್ಲಿ ನೌಕರರಿಗೆ ಬಲವಂತದ ರಾಜೀನಾಮೆಗೆ ಒತ್ತಾಯ

ಬೆಂಗಳೂರು ಮೂಲದ ಎಡ್ಟೆಕ್ ದೈತ್ಯ ಬೈಜೂಸ್ ಕೇರಳದ ತಿರುವನಂತಪುರಂನಲ್ಲಿ ಉದ್ಯೋಗಿಗಳನ್ನು ಭಾರೀ ಮಟ್ಟಿದಲ್ಲಿ ವಜಾಗೊಳಿಸಿ ಸುದ್ದಿ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲೂ ಅಂತಹ ಆರೋಪಗಳು ಕೇಳಿಬರುತ್ತಿವೆ.

ಬೆಂಗಳೂರು: ಬೆಂಗಳೂರು ಮೂಲದ ಎಡ್ಟೆಕ್ ದೈತ್ಯ ಬೈಜೂಸ್ ಕೇರಳದ ತಿರುವನಂತಪುರಂನಲ್ಲಿ ಉದ್ಯೋಗಿಗಳನ್ನು ಭಾರೀ ಮಟ್ಟಿದಲ್ಲಿ ವಜಾಗೊಳಿಸಿ ಸುದ್ದಿ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲೂ ಅಂತಹ ಆರೋಪಗಳು ಕೇಳಿಬರುತ್ತಿವೆ.

ಮೂಲಗಳ ಪ್ರಕಾರ, ಉದ್ಯೋಗಿಗಳನ್ನು ತಕ್ಷಣವೇ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗುತ್ತಿದೆ. ಇದೇ ಅಲ್ಲದೆ ತನ್ನ ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ(ಕೆಐಟಿಯು) ಆರೋಪಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಕೆಐಟಿಯು ಕಾರ್ಯದರ್ಶಿ ಸೂರಜ್ ನಿಡಿಯಂಗ, ಬೈಜೂಸ್‌ನಲ್ಲಿರುವ ನೌಕರರು ರಾಜೀನಾಮೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ಮಾನವ ಸಂಪನ್ಮೂಲ ಇಲಾಖೆಯು ನೌಕರರಿಂದ ಬಲವಂತವಾಗಿ ರಾಜೀನಾಮೆ ಪಡೆಯುವಲ್ಲಿ ತೊಡಗಿದೆ ಎಂದು ಹೇಳಿದರು.

ಇನ್ನು ಸಂಸ್ಧೆಯಿಂದ ವಜಾಗೊಳಿಸುವ ಬಗ್ಗೆ ಯಾವುದೇ ಲಿಖಿತ ಸಾಕ್ಷ್ಯವಿಲ್ಲ. ಕಳೆದ ಒಂದು ವಾರದಿಂದ ಮಾನವ ಸಂಪನ್ಮೂಲ ಇಲಾಖೆ ನೌಕರರನ್ನು ಕರೆಸಿ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಸಲ್ಲಿಸುವಂತೆ ಹೇಳುತ್ತಿದೆ ಎಂದರು.

ಉದ್ಯೋಗಿಗಳನ್ನು ಭಾರೀ ಮಟ್ಟದಲ್ಲಿ ತೆಗೆದುಹಾಕುತ್ತಿರುವ ಸುದ್ದಿಗಳು ಮಾಧ್ಯಮಗಳಲ್ಲಿ ಬಿತ್ತರಗೊಂಡ ನಂತರ ಉದ್ಯೋಗಿಗಳು ಕೇರಳದ ಕಾರ್ಮಿಕ ಸಚಿವ ಶಿವನ್‌ಕುಟ್ಟಿ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ ಬೈಜು ತನ್ನ ತಿರುವನಂತಪುರಂ ಕಚೇರಿಯಲ್ಲಿನ ಆಡಳಿತ ತಂಡದವರಿಗೆ ವರ್ಗಾವಣೆ ಆಯ್ಕೆಗಳನ್ನು ನೀಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT