ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನ ಬೈಜೂಸ್ ಪ್ರಧಾನ ಕಚೇರಿಯಲ್ಲಿ ನೌಕರರಿಗೆ ಬಲವಂತದ ರಾಜೀನಾಮೆಗೆ ಒತ್ತಾಯ

ಬೆಂಗಳೂರು ಮೂಲದ ಎಡ್ಟೆಕ್ ದೈತ್ಯ ಬೈಜೂಸ್ ಕೇರಳದ ತಿರುವನಂತಪುರಂನಲ್ಲಿ ಉದ್ಯೋಗಿಗಳನ್ನು ಭಾರೀ ಮಟ್ಟಿದಲ್ಲಿ ವಜಾಗೊಳಿಸಿ ಸುದ್ದಿ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲೂ ಅಂತಹ ಆರೋಪಗಳು ಕೇಳಿಬರುತ್ತಿವೆ.

ಬೆಂಗಳೂರು: ಬೆಂಗಳೂರು ಮೂಲದ ಎಡ್ಟೆಕ್ ದೈತ್ಯ ಬೈಜೂಸ್ ಕೇರಳದ ತಿರುವನಂತಪುರಂನಲ್ಲಿ ಉದ್ಯೋಗಿಗಳನ್ನು ಭಾರೀ ಮಟ್ಟಿದಲ್ಲಿ ವಜಾಗೊಳಿಸಿ ಸುದ್ದಿ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲೂ ಅಂತಹ ಆರೋಪಗಳು ಕೇಳಿಬರುತ್ತಿವೆ.

ಮೂಲಗಳ ಪ್ರಕಾರ, ಉದ್ಯೋಗಿಗಳನ್ನು ತಕ್ಷಣವೇ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗುತ್ತಿದೆ. ಇದೇ ಅಲ್ಲದೆ ತನ್ನ ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ(ಕೆಐಟಿಯು) ಆರೋಪಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಕೆಐಟಿಯು ಕಾರ್ಯದರ್ಶಿ ಸೂರಜ್ ನಿಡಿಯಂಗ, ಬೈಜೂಸ್‌ನಲ್ಲಿರುವ ನೌಕರರು ರಾಜೀನಾಮೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ಮಾನವ ಸಂಪನ್ಮೂಲ ಇಲಾಖೆಯು ನೌಕರರಿಂದ ಬಲವಂತವಾಗಿ ರಾಜೀನಾಮೆ ಪಡೆಯುವಲ್ಲಿ ತೊಡಗಿದೆ ಎಂದು ಹೇಳಿದರು.

ಇನ್ನು ಸಂಸ್ಧೆಯಿಂದ ವಜಾಗೊಳಿಸುವ ಬಗ್ಗೆ ಯಾವುದೇ ಲಿಖಿತ ಸಾಕ್ಷ್ಯವಿಲ್ಲ. ಕಳೆದ ಒಂದು ವಾರದಿಂದ ಮಾನವ ಸಂಪನ್ಮೂಲ ಇಲಾಖೆ ನೌಕರರನ್ನು ಕರೆಸಿ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಸಲ್ಲಿಸುವಂತೆ ಹೇಳುತ್ತಿದೆ ಎಂದರು.

ಉದ್ಯೋಗಿಗಳನ್ನು ಭಾರೀ ಮಟ್ಟದಲ್ಲಿ ತೆಗೆದುಹಾಕುತ್ತಿರುವ ಸುದ್ದಿಗಳು ಮಾಧ್ಯಮಗಳಲ್ಲಿ ಬಿತ್ತರಗೊಂಡ ನಂತರ ಉದ್ಯೋಗಿಗಳು ಕೇರಳದ ಕಾರ್ಮಿಕ ಸಚಿವ ಶಿವನ್‌ಕುಟ್ಟಿ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ ಬೈಜು ತನ್ನ ತಿರುವನಂತಪುರಂ ಕಚೇರಿಯಲ್ಲಿನ ಆಡಳಿತ ತಂಡದವರಿಗೆ ವರ್ಗಾವಣೆ ಆಯ್ಕೆಗಳನ್ನು ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT