ರೌಡಿ ಶೀಟರ್ ಗೊಣ್ಣೆ ವಿಜಿ 
ರಾಜ್ಯ

ಪೊಲೀಸ್ ಪೇದೆಗಳ ಮೇಲೆ ಡ್ರ್ಯಾಗರ್ ನಿಂದ ಹಲ್ಲೆ: ರೌಡಿ ಗೊಣ್ಣೆ ವಿಜಿ ಬಂಧನಕ್ಕೆ ತೀವ್ರ ಶೋಧ

ಬೆನ್ನಟ್ಟಿ ಹಿಡಿಯಲು ಬಂದ ಮಹಿಳಾ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಮೇಲೆ ಕಾರದ ಪುಡಿ ಎರಚಿ ಡ್ರ್ಯಾಗರ್ ನಿಂದ ಹಲ್ಲೆಗೈದು ಪರಾರಿಯಾಗಿರುವ ಕುಖ್ಯಾತ ರೌಡಿ ವಿಜಯ್ ಆಲಿಯಾಸ್ ಗೊಣ್ಣೆ ವಿಜಿ ಬಂಧನಕ್ಕೆ  ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ನಡೆಸಲಾಗಿದೆ.

ಬೆಂಗಳೂರು: ಬೆನ್ನಟ್ಟಿ ಹಿಡಿಯಲು ಬಂದ ಮಹಿಳಾ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಮೇಲೆ ಕಾರದ ಪುಡಿ ಎರಚಿ ಡ್ರ್ಯಾಗರ್ ನಿಂದ ಹಲ್ಲೆಗೈದು ಪರಾರಿಯಾಗಿರುವ ಕುಖ್ಯಾತ ರೌಡಿ ವಿಜಯ್ ಆಲಿಯಾಸ್ ಗೊಣ್ಣೆ ವಿಜಿ ಬಂಧನಕ್ಕೆ  ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ನಡೆಸಲಾಗಿದೆ.

ರೌಡಿ ಗೊಣ್ಣೆ ವಿಜಿ ಬಂಧನಕ್ಕೆ ಗಿರಿನಗರ ಇನ್ಸ್ ಪೆಕ್ಟರ್ ಸೇರಿ ಮೂವರು ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚಿಸಿ ಶೋಧ ನಡೆಸಲಾಗಿದ್ದು, ಆತನ ಸುಳಿವು ಪತ್ತೆಯಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ಮಹಿಳಾ ಕಾನ್ಸ್ ಟೇಬಲ್ ನೇತ್ರಾ ಅವರು ನಿನ್ನೆ ಸಂಜೆ 4ರ ಸುಮಾರಿಗೆ ಹೊಸಕೆರೆ ಬಸ್ ನಿಲ್ದಾಣದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ನೀಲಿ ಬಣ್ಣದ ಡಿಯೋವೊಂದನ್ನು ಗಮನಿಸಿದ್ದು, ಅದನ್ನು ಚಲಾಯಿಸುತ್ತಿರುವುದು ರೌಡಿ ಶೀಟರ್ ವಿಜಯ್ ಎಂಬುದು ಗೊತ್ತಾಗಿದೆ.

ಈ ವೇಳೆ ಪೇದೆಗಳಾದ ನೇತ್ರಾ, ನಾಗೇಂದ್ರ , ತೇಲಿ ಹಾಗೂ ಕಿರಣ್ ಆರೋಪಿ ವಿಜಯ್ ನನ್ನು ಹಿಡಿಯಲು ಯತ್ನಿಸಿದ್ದಾರೆ. ತಪ್ಪಿಸಿಕೊಂಡು ಓಡಲು ಯತ್ನಿಸಿದ  ಆರೋಪಿಯನ್ನು ನಾಗೇಂದ್ರ ಹಾಗೂ ಕಿರಣ್ ಇಬ್ಬರು ಸೇರಿ ಹಿಡಿದಿದ್ದಾರೆ. ಅಷ್ಟರಲ್ಲಿ ಆರೋಪಿ ಕಾರದ ಪುಡಿ ತೆಗೆದು ಮೂವರು ಕಾನ್ಸ್ ಟೇಬಲ್ ಮೇಲೆ ಎರಚಿದ್ದಾನೆ. ಅಲ್ಲದೇ, ತನ್ನ ಬಳಿಯಿದ್ದ ಡ್ರ್ಯಾಗರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. 

ಸ್ಥಳೀಯರು ಕೂಡಲೇ ಪೊಲೀಸರ ನೆರವಿಗೆ ಧಾವಿಸಿದ್ದು, ಗಾಯಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT