ರೌಡಿ ಶೀಟರ್ ಗೊಣ್ಣೆ ವಿಜಿ 
ರಾಜ್ಯ

ಪೊಲೀಸ್ ಪೇದೆಗಳ ಮೇಲೆ ಡ್ರ್ಯಾಗರ್ ನಿಂದ ಹಲ್ಲೆ: ರೌಡಿ ಗೊಣ್ಣೆ ವಿಜಿ ಬಂಧನಕ್ಕೆ ತೀವ್ರ ಶೋಧ

ಬೆನ್ನಟ್ಟಿ ಹಿಡಿಯಲು ಬಂದ ಮಹಿಳಾ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಮೇಲೆ ಕಾರದ ಪುಡಿ ಎರಚಿ ಡ್ರ್ಯಾಗರ್ ನಿಂದ ಹಲ್ಲೆಗೈದು ಪರಾರಿಯಾಗಿರುವ ಕುಖ್ಯಾತ ರೌಡಿ ವಿಜಯ್ ಆಲಿಯಾಸ್ ಗೊಣ್ಣೆ ವಿಜಿ ಬಂಧನಕ್ಕೆ  ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ನಡೆಸಲಾಗಿದೆ.

ಬೆಂಗಳೂರು: ಬೆನ್ನಟ್ಟಿ ಹಿಡಿಯಲು ಬಂದ ಮಹಿಳಾ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಮೇಲೆ ಕಾರದ ಪುಡಿ ಎರಚಿ ಡ್ರ್ಯಾಗರ್ ನಿಂದ ಹಲ್ಲೆಗೈದು ಪರಾರಿಯಾಗಿರುವ ಕುಖ್ಯಾತ ರೌಡಿ ವಿಜಯ್ ಆಲಿಯಾಸ್ ಗೊಣ್ಣೆ ವಿಜಿ ಬಂಧನಕ್ಕೆ  ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ನಡೆಸಲಾಗಿದೆ.

ರೌಡಿ ಗೊಣ್ಣೆ ವಿಜಿ ಬಂಧನಕ್ಕೆ ಗಿರಿನಗರ ಇನ್ಸ್ ಪೆಕ್ಟರ್ ಸೇರಿ ಮೂವರು ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚಿಸಿ ಶೋಧ ನಡೆಸಲಾಗಿದ್ದು, ಆತನ ಸುಳಿವು ಪತ್ತೆಯಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ಮಹಿಳಾ ಕಾನ್ಸ್ ಟೇಬಲ್ ನೇತ್ರಾ ಅವರು ನಿನ್ನೆ ಸಂಜೆ 4ರ ಸುಮಾರಿಗೆ ಹೊಸಕೆರೆ ಬಸ್ ನಿಲ್ದಾಣದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ನೀಲಿ ಬಣ್ಣದ ಡಿಯೋವೊಂದನ್ನು ಗಮನಿಸಿದ್ದು, ಅದನ್ನು ಚಲಾಯಿಸುತ್ತಿರುವುದು ರೌಡಿ ಶೀಟರ್ ವಿಜಯ್ ಎಂಬುದು ಗೊತ್ತಾಗಿದೆ.

ಈ ವೇಳೆ ಪೇದೆಗಳಾದ ನೇತ್ರಾ, ನಾಗೇಂದ್ರ , ತೇಲಿ ಹಾಗೂ ಕಿರಣ್ ಆರೋಪಿ ವಿಜಯ್ ನನ್ನು ಹಿಡಿಯಲು ಯತ್ನಿಸಿದ್ದಾರೆ. ತಪ್ಪಿಸಿಕೊಂಡು ಓಡಲು ಯತ್ನಿಸಿದ  ಆರೋಪಿಯನ್ನು ನಾಗೇಂದ್ರ ಹಾಗೂ ಕಿರಣ್ ಇಬ್ಬರು ಸೇರಿ ಹಿಡಿದಿದ್ದಾರೆ. ಅಷ್ಟರಲ್ಲಿ ಆರೋಪಿ ಕಾರದ ಪುಡಿ ತೆಗೆದು ಮೂವರು ಕಾನ್ಸ್ ಟೇಬಲ್ ಮೇಲೆ ಎರಚಿದ್ದಾನೆ. ಅಲ್ಲದೇ, ತನ್ನ ಬಳಿಯಿದ್ದ ಡ್ರ್ಯಾಗರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. 

ಸ್ಥಳೀಯರು ಕೂಡಲೇ ಪೊಲೀಸರ ನೆರವಿಗೆ ಧಾವಿಸಿದ್ದು, ಗಾಯಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT