ವಿಧಾನ ಸೌಧ 
ರಾಜ್ಯ

ಒಬಿಸಿ ಪಟ್ಟಿಯಿಂದ ತಳವಾರ, ಪರಿವಾರ ಸಮುದಾಯವನ್ನು ತೆಗೆದುಹಾಕಿದ ರಾಜ್ಯ ಸರ್ಕಾರ!

ಒಬಿಸಿ ಪಟ್ಟಿಯಿಂದ ತಳವಾರ ಹಾಗೂ ಪರಿವಾರ ಸಮುದಾಯಗಳನ್ನು ತೆಗೆದುಹಾಕಿದ್ದು ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರು: ಒಬಿಸಿ ಪಟ್ಟಿಯಿಂದ ತಳವಾರ ಹಾಗೂ ಪರಿವಾರ ಸಮುದಾಯಗಳನ್ನು ತೆಗೆದುಹಾಕಿದ್ದು ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಪರಿಶಿಷ್ಟ ಪಂಗಡ ಮೀಸಲಾತಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಒಬಿಸಿಯಿಂದ ತಳವಾರ ಮತ್ತು ಪರಿವಾರ ಸಮುದಾಯವನ್ನು ಕೈಬಿಡಲಾಗಿದೆ. 2020ರ ಮಾರ್ಚ್ 19ರಂದು ಕೇಂದ್ರ ಸರ್ಕಾರ ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿತ್ತು. ಆದರೆ ಇದರಿಂದ ಕೆಲ ಗೊಂದಲಗಳು ಸೃಷ್ಟಿಯಾಗಿತ್ತು.

ಕೇಂದ್ರ ಸರ್ಕಾರ ತನ್ನ ಗೆಜೆಟಿಯರ್ ನಲ್ಲಿ ನಾಯಕ, ನಾಯಕ್ ಪರ್ಯಾಯ ಪದಗಳಾದ ಪರಿವಾರ ಹಾಗೂ ತಳವಾರ ಜಾತಿಗಳನ್ನು ಒಳಗೊಂಡಂತೆ ಪರಿಶಿಷ್ಠ ಪಂಗಡಕ್ಕೆ ಸೇರಿದವರಿಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣಪತ್ರ ನೀಡಬಹುದು ಎಂದು ಹೇಳಿತ್ತು. 

ಇನ್ನು ರಾಜ್ಯ ಸರ್ಕಾರ ಕಳೆದ ಜೂನ್‌ನಲ್ಲಿ ಹೊರಡಿಸಿದ ಸುತ್ತೋಲೆ ಹಾಗೂ ಆಗಸ್ಟ್‌ನಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಪರಿಶಿಷ್ಟ ಪಂಗಡದ ಪರಿವಾರ ಹಾಗೂ ತಳವಾರ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿತ್ತು. ಆದರೂ ಈ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಧಿಕೃತವಾಗಿ ಪಟ್ಟಿಯಿಂದ ತೆಗೆದುಹಾಕಿರುವುದರಿಂದ ಗೊಂದಲ ಪರಿಹಾರವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT