ಸಿದ್ದರಾಮಯ್ಯ 
ರಾಜ್ಯ

ಬಿಜೆಪಿ ಸರ್ಕಾರದಿಂದ ಕಾಂಗ್ರೆಸ್ ನ ಕಲ್ಯಾಣ ಯೋಜನೆಗಳ ಸ್ಥಗಿತ: ಸಿದ್ದರಾಮಯ್ಯ ಆರೋಪ

ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಎಲ್ಲಾ ಪ್ರಮುಖ ಯೋಜನೆಗಳು ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೈಸೂರು: ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಎಲ್ಲಾ ಪ್ರಮುಖ ಯೋಜನೆಗಳು ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಂಡ್ಯ ತಾಲೂಕಿನ ತಿರುಮಲಾಪುರದಲ್ಲಿ ಹುಲಿಯೂರಮ್ಮ ದೇವಸ್ಥಾನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯಲಿಲ್ಲ, ಬಡವರಿಗೆ ದ್ರೋಹ ಬಗೆದಿಲ್ಲ ಎಂದಿದ್ದಾರೆ.

ಮೀಸಲಾತಿ ಹೆಚ್ಚಿಸಲು ಕೆಲವು ಸಮುದಾಯಗಳು ಹೋರಾಟ ವಿಚಾರವಾಗಿ ಮಾತನಾಡಿದ ಅವರು, ಯಾರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ್ದಾರೆ, ಶೋಷಣೆಗೆ ಒಳಪಟ್ಟಿದ್ದಾರೆ. ಅವರಿಗೆ ಮೀಸಲಾತಿ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಈ ಸರ್ಕಾರಗಳಿಂದ ಜನರ ಕಲ್ಯಾಣ ಸಾಧ್ಯವಿಲ್ಲ ಎಂಬುದು ಇದೀಗ ಎಲ್ಲರಿಗೂ ಅರ್ಥವಾಗುತ್ತಿದೆ. ದೇಶ, ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು ಬಡವರು, ರೈತರು, ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಮಾರಕವಾಗಿವೆ. ಅಲ್ಲದೆ ಧರ್ಮ ಧರ್ಮಗಳ ನಡುವೆ ವಿಷಬೀಜ ಭಿತ್ತಿ ಜನರು ನೆಮ್ಮದಿಯಿಂದ ಬದುಕಲಾರದ ವಾತಾವರಣ ನಿರ್ಮಾಣ ಮಾಡಲಾಗಿದೆ. ಈ ಎಲ್ಲಾ ಕಾರಣಗಳಿಂದ ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಬರುವ ಸಂಪೂರ್ಣ ವಿಶ್ವಾಸವಿದೆ ಎಂದರು.

ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಿಲ್ಲ ಎಂದು ಆರೋಪಿಸಿದರು. ಎಸ್‌ಸಿ/ಎಸ್‌ಟಿಗಳ ಪರವಾಗಿ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕುಗಳಿವೆ? ಇಂತಹ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಬೇಕೆ,'' ಎಂದು ಪ್ರಶ್ನಿಸಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ. ಮಂಡ್ಯದಲ್ಲಿ ಮೈಶುಗರ್ ಕಾರ್ಖಾನೆ ತೆರೆಯಲು ಪಕ್ಷ ಕ್ರಮ ಕೈಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT