ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರರು 
ರಾಜ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ಹಣಕಾಸು ವರ್ಷದಲ್ಲಿ ರೂ. 5,000 ಕೋಟಿ ಮೀಸಲು- ಸಿಎಂ ಬೊಮ್ಮಾಯಿ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಭಾರಿ ರೂ.1, 500 ಕೋಟಿ ಮೀಸಲಿಡಲಾಗಿದೆ, ಮುಂದಿನ ಹಣಕಾಸು ವರ್ಷದಲ್ಲಿ ರೂ. 5,000 ಕೋಟಿ ಮೀಸಲಿರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಭಾರಿ ರೂ.1, 500 ಕೋಟಿ ಮೀಸಲಿಡಲಾಗಿದೆ, ಮುಂದಿನ ಹಣಕಾಸು ವರ್ಷದಲ್ಲಿ ರೂ. 5,000 ಕೋಟಿ ಮೀಸಲಿರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲಬುರಗಿಯಲ್ಲಿಂದು  ರಾಜ್ಯ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು,  ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬಿಎಸ್ ಯಡಿಯೂರಪ್ಪ ಬದಲಾಯಿಸಿದರು. ಅವರ ಆಶಯಕ್ಕೆ ತಕ್ಕಂತೆ ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

20 ಸಾವಿರ ಲಂಬಾಣಿ ತಾಂಡಾಗಳ ಮನೆಗಳಿಗೆ ಹಕ್ಕು ಪತ್ರಗಳನ್ನು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿಸಿ ವಿತರಿಸುತ್ತಿದ್ದೇವೆ. ಇಷ್ಟು ವರ್ಷ ಲಂಬಾಣಿ ಸಮುದಾಯದವರನ್ನು ಕೇವಲ ಮತ ಹಾಕಲು ಬಳಸಿಕೊಳ್ಳುತ್ತಿದ್ದ ನಾಯಕರ ಬಗ್ಗೆ ನೀವು ಇನ್ಮುಂದೆ ಬಹಳ ಎಚ್ಚರವಾಗಿರಬೇಕು ಎಂದು ಅವರು ತಿಳಿಸಿದರು.

ಕುರಿಗಾಹಿಗಳಿಗೆ 354 ಕೋಟಿ ರೂ. ಅನುದಾನವನ್ನು ಸರ್ಕಾರ ನೀಡಿದೆ. ಕುರುಬ ಸಮುದಾಯಕ್ಕೆ ಸಂಪುಟದಲ್ಲಿಯೂ ಸೂಕ್ತ ಪ್ರಾತಿನಿಧ್ಯ ನೀಡಿದೆ. ಆದರೆ, ಸಿದ್ದರಾಮಯ್ಯ ಅವರ ಸರ್ಕಾರ ಅನುದಾನ ನೀಡುವುದು ದೂರದ ಮಾತಾಗಿತ್ತು. ಸಂಪುಟದಲ್ಲಿ ಒಂದೇ ಒಂದು ಸಚಿವ ಸ್ಥಾನ ಸಹ ನೀಡಿರಲಿಲ್ಲ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಮತ್ತೊಮ್ಮೆ ಜನಪರ ಹಾಗೂ ಕಲ್ಯಾಣ ಸರ್ಕಾರ ರಚನೆಯಾಗಬೇಕು. ಹಿಂದುಳಿದ ವರ್ಗದವರು ತಮ್ಮ ಮತ ಬ್ಯಾಂಕ್ ಎಂದು ಭ್ರಮೆಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಸತ್ಯದರ್ಶನ ಮಾಡಿಸಬೇಕು ಎಂದು ಜನರಲ್ಲಿ ಮುಖ್ಯಮಂತ್ರಿ ಮನವಿ ಮಾಡಿದರು.

ಹಿಂದುಳಿದ ವರ್ಗದವರ ಮತ ಪಡೆದುಕೊಂಡು, ಹಿಂದುಳಿದ ವರ್ಗಗಳನ್ನು ಕತ್ತಲಿಟ್ಟು, ಅವರವರ ಕುಟುಂಬಗಳನ್ನು ಅಭಿವೃದ್ಧಿಪಡಿಸಿಕೊಂಡ ನಾಯಕರ ಬದಲಾವಣೆ ಮಾಡುವ ಕಾಲ ಬಹಳ ಸನ್ನಿಹಿತವಾಗಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!