ಚಂದ್ರಶೇಖರ ಭಂಡಾರಿ 
ರಾಜ್ಯ

RSS ನ ಜ್ಯೇಷ್ಠ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ ನಿಧನ 

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನ ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ (87) ಅ.30 ರಂದು ನಿಧನರಾದರು.

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನ ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ (87) ಅ.30 ರಂದು ನಿಧನರಾದರು.
 
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್)  ಚಂದ್ರಶೇಖರ ಭಂಡಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ಅಗಲಿದ ಗಣ್ಯರು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮತ್ತು ವಿಶ್ವಸಂವಾದ ಕೇಂದ್ರ ಕರ್ನಾಟಕದ ಸಂಸ್ಥಾಪಕ ಟ್ರಸ್ಟಿ ಆಗಿದ್ದರು.

ಆರ್ ಎಸ್ಎಸ್ ನ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಹಲವು ಹೊಣೆಗಾರಿಕೆಯನ್ನು ನಿಭಾಯಿಸಿದ್ದ ಭಂಡಾರಿಯವರು ಅನೇಕ ಪುಸ್ತಕಗಳ ಲೇಖಕರಷ್ಟೇ ಅಲ್ಲದೇ ಕನ್ನಡ ಭಾಷೆಗೆ ಅನೇಕ ಕೃತಿಗಳನ್ನು ಅನುವಾದ ಮಾಡಿದ್ದರು.  6 ದಶಕಗಳ ಕಾಲ ಆರ್ ಎಸ್ ಎಸ್ ನ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದ ಚಂದ್ರಶೇಖರ ಭಂಡಾರಿ 'ಧರೆಗವತರಿಸಿದೆ ಸ್ವರ್ಗದ ಸ್ಪರ್ಧಿಯು ಸುಂದರ ತಾಯ್ನೆಲವು, ಸೇರಿದಂತೆ ಅನೇಕ ದೇಶಭಕ್ತಿಗೀತೆಗಳನ್ನು ರಚಿಸಿದ್ದರು.
 
ಡಾ. ಬಿಆರ್ ಅಂಬೇಡ್ಕರ್ ಕುರಿತು ಚಂದ್ರಶೇಖರ್ ಭಂಡಾರಿ ಅವರು ಅನುವಾದಿಸಿದ್ದ ಕೃತಿ 2011 ರಲ್ಲಿ ಪ್ರಕಟವಾಗಿತ್ತು. ಕುವೆಂಪು ಭಾಷಾ ಭಾರತಿ, ಚಂದ್ರಶೇಖರ ಭಂಡಾರಿ ಅವರಿಗೆ ಉತ್ತಮ ಅನುವಾದಕ ಪ್ರಶಸ್ತಿ ನೀಡಿ ಗೌರವಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್