ಚಂದ್ರಶೇಖರ ಭಂಡಾರಿ 
ರಾಜ್ಯ

RSS ನ ಜ್ಯೇಷ್ಠ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ ನಿಧನ 

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನ ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ (87) ಅ.30 ರಂದು ನಿಧನರಾದರು.

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನ ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ (87) ಅ.30 ರಂದು ನಿಧನರಾದರು.
 
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್)  ಚಂದ್ರಶೇಖರ ಭಂಡಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ಅಗಲಿದ ಗಣ್ಯರು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮತ್ತು ವಿಶ್ವಸಂವಾದ ಕೇಂದ್ರ ಕರ್ನಾಟಕದ ಸಂಸ್ಥಾಪಕ ಟ್ರಸ್ಟಿ ಆಗಿದ್ದರು.

ಆರ್ ಎಸ್ಎಸ್ ನ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಹಲವು ಹೊಣೆಗಾರಿಕೆಯನ್ನು ನಿಭಾಯಿಸಿದ್ದ ಭಂಡಾರಿಯವರು ಅನೇಕ ಪುಸ್ತಕಗಳ ಲೇಖಕರಷ್ಟೇ ಅಲ್ಲದೇ ಕನ್ನಡ ಭಾಷೆಗೆ ಅನೇಕ ಕೃತಿಗಳನ್ನು ಅನುವಾದ ಮಾಡಿದ್ದರು.  6 ದಶಕಗಳ ಕಾಲ ಆರ್ ಎಸ್ ಎಸ್ ನ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದ ಚಂದ್ರಶೇಖರ ಭಂಡಾರಿ 'ಧರೆಗವತರಿಸಿದೆ ಸ್ವರ್ಗದ ಸ್ಪರ್ಧಿಯು ಸುಂದರ ತಾಯ್ನೆಲವು, ಸೇರಿದಂತೆ ಅನೇಕ ದೇಶಭಕ್ತಿಗೀತೆಗಳನ್ನು ರಚಿಸಿದ್ದರು.
 
ಡಾ. ಬಿಆರ್ ಅಂಬೇಡ್ಕರ್ ಕುರಿತು ಚಂದ್ರಶೇಖರ್ ಭಂಡಾರಿ ಅವರು ಅನುವಾದಿಸಿದ್ದ ಕೃತಿ 2011 ರಲ್ಲಿ ಪ್ರಕಟವಾಗಿತ್ತು. ಕುವೆಂಪು ಭಾಷಾ ಭಾರತಿ, ಚಂದ್ರಶೇಖರ ಭಂಡಾರಿ ಅವರಿಗೆ ಉತ್ತಮ ಅನುವಾದಕ ಪ್ರಶಸ್ತಿ ನೀಡಿ ಗೌರವಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

ಮುಂಬೈ ಮುಂಗಾರು ಅಬ್ಬರ: ಜಲಾವೃತ ರೈಲು ಹಳಿಗಳಲ್ಲಿ ಮೀನುಗಳ ಸ್ವಚ್ಛಂದ ಈಜಾಟ, Video Viral

ರಾಜ್ಯ ಸರ್ಕಾರಕ್ಕೆ ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡೋ ಅಧಿಕಾರವೇ ಇಲ್ಲ-ಛಲವಾದಿ ನಾರಾಯಣ ಸ್ವಾಮಿ ಕಿಡಿ!

SIR ಕಂಪ್ಯೂಟರೀಕರಣ, ಚಿಕ್ಕಬಳ್ಳಾಪುರ ಅಪರೂಪದ ಸಾಧನೆ, ರಾಜ್ಯದಲ್ಲೇ ಮೊದಲ ಸ್ಥಾನ!