ಹಿರಿಯ ನಟರಾದ ದತ್ತಣ್ಣ, ಅವಿನಾಶ್ 
ರಾಜ್ಯ

ಹಿರಿಯ ನಟ ದತ್ತಣ್ಣ, ಅವಿನಾಶ್ ಸೇರಿದಂತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ

ಈ ಬಾರಿ ಚಲನಚಿತ್ರ ಕ್ಷೇತ್ರದಲ್ಲಿ ದತ್ತಣ್ಣ, ಅವಿನಾಶ್, ಕಿರುತೆರೆ ಕ್ಷೇತ್ರದಲ್ಲಿ ಸಿಹಿಕಹಿ ಚಂದ್ರು, ಲೇಖಕ ಅ.ರಾ. ಮಿತ್ರಾ ಸೇರಿದಂತೆ 67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ. 

ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳು, ಸಂಸ್ಥೆಗಳಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯವನ್ನು ಸರ್ಕಾರ ಅನುಸರಿಸಿಕೊಂಡು ಬಂದಿದ್ದು, ಈ ಬಾರಿ ಚಲನಚಿತ್ರ ಕ್ಷೇತ್ರದಲ್ಲಿ ದತ್ತಣ್ಣ, ಅವಿನಾಶ್, ಕಿರುತೆರೆ ಕ್ಷೇತ್ರದಲ್ಲಿ ಸಿಹಿಕಹಿ ಚಂದ್ರು, ಲೇಖಕ ಅ.ರಾ. ಮಿತ್ರಾ ಸೇರಿದಂತೆ 67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ. 

ಪತ್ರಿಕೋದ್ಯಮ- ಬೆಂಗಳೂರಿನ ಹೆಚ್.ಆರ್. ಶ್ರೀಶಾ, ಗದಗ ಜಿಲ್ಲೆಯ ಜಿ.ಎಂ. ಶಿರಹಟ್ಟಿ, ವಿಜ್ಞಾನ ಮತ್ತು ತಂತ್ರಜ್ಞಾನ- ಬೆಂಗಳೂರಿನ ಇಸ್ರೋ ಸಂಸ್ಥೆ ಮಾಜಿ ನಿರ್ದೇಶಕ ಕೆ. ಶಿವನ್, ರಾಯಚೂರಿನ ಡಾ. ಡಿ.ಆರ್ ಬಳೂರಗಿ, ಕೃಷಿ- ಕೊಡಗಿನ ಗಣೇಶ್ ತಿಮ್ಮಯ್ಯ, ಚಿಕ್ಕಮಗಳೂರಿನ ಚಂದ್ರಶೇಖರ್ ನಾರಾಯಣಪುರ, ಪರಿಸರ- ರಾಮನಗರದ ಸಾಲುಮರದ ನಿಂಗಣ್ಣ, ಪೌರಕಾರ್ಮಿಕ - ಮಲ್ಲಮ್ಮ ಹೂವಿನ ಹಡಗಲಿ, ಆಡಳಿತ- ಡಾ. ಎಲ್.ಎಚ್. ಮಂಜುನಾಥ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಶಿವಮೊಗ್ಗ, ಮಧನ್ ಗೋಪಾಲ್ ಬೆಂಗಳೂರು ಮತ್ತಿತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

"೨೦೨೧-೨೨ನೇ ಸಾಲಿನ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ'ಗೆ ಆಯ್ಕೆಯಾಗಿರುವ ಎಲ್ಲ ಸಾಧಕರು ಹಾಗೂ  'ಅಮೃತ ಮಹೋತ್ಸವ ರಾಜ್ಯಪ್ರಶಸ್ತಿ' ಪುರಸ್ಕೃತ ರಾಜ್ಯದ ೧೦ ಸಂಘ-ಸಂಸ್ಥೆಗಳನ್ನು ಅಭಿನಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಎಲ್ಲ ಸಾಧಕರ ಸಾಧನೆಗಳು ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಆಶಿಸಿದ್ದಾರೆ. ಹಾಗೆಯೇ, ಸಾಧಕರನ್ನು ಗುರುತಿಸುವಲ್ಲಿ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಿರುವ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT