ನರಸಿಂಹ ಮೂರ್ತಿ 
ರಾಜ್ಯ

ಸತತ 20 ದಿನ ಜೀವನ್ಮರಣ ಹೋರಾಟ ನಡೆಸಿ ಜಾನಪದ ಕಲಾವಿದ ನರಸಿಂಹ ಮೂರ್ತಿ ನಿಧನ!

ಧರೆಗುರುಳುತ್ತಿದ್ದ ಮರದ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಜಾನಪದ ಕಲಾವಿದ ಹಾಗೂ ಹಾರ್ಮೋನಿಯಂ ವಾದಕ ನರಸಿಂಹ ಮೂರ್ತಿ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಬೆಂಗಳೂರು: ಧರೆಗುರುಳುತ್ತಿದ್ದ ಮರದ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಜಾನಪದ ಕಲಾವಿದ ಹಾಗೂ ಹಾರ್ಮೋನಿಯಂ ವಾದಕ ನರಸಿಂಹ ಮೂರ್ತಿ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಅಕ್ಟೋಬರ್ 12 ರಂದು ದುರ್ಘಟನೆಯೊಂದು ಹೆಸರಘಟ್ಟದಲ್ಲಿ ಸಂಭವಿಸಿತ್ತು. ದ್ವಿಚಕ್ರ ವಾಹನದಲ್ಲಿ ನರಸಿಂಹ ಮೂರ್ತಿಯವರು ಮನೆಗೆ ತೆರಳುತ್ತಿದ್ದಾಗ ಧರೆಗುರುಳುತ್ತಿದ್ದ ಮರದ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ನರಸಿಂಹ ಮೂರ್ತಿಯವರನ್ನು ಫ್ರೇಜರ್ ಟೌನ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆಸ್ಪತ್ರೆಯಲ್ಲಿ ಸತತ 20 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಮೂರ್ತಿಯವರು ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸಂಬಂಧಿ ರಘು ಮಾತನಾಡಿ, ಮೂರ್ತಿಯವರು ಕಾರ್ಯಕ್ರಮಗಳು, ಗ್ರಾಮಗಳ ಜಾತ್ರೆ, ದೇವಸ್ಥಾನಗಳಲ್ಲಿ ಹಾರ್ಮೋನಿಯಂ ನುಡಿಸುತ್ತಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಕುಟುಂಬದ ಆರ್ಥಿಕ ಸ್ಥಿತಿ ದುರ್ಬಲವಾಗಿದೆ. ದುರ್ಘಟನೆ ಸಂಭವಿಸಿದ್ದರೂ, ಹೆಸರಘಟ್ಟ ಗ್ರಾಮ ಪಂಚಾಯಿತಿಗಾಗಲಿ, ಶಾಸಕರ ಕಚೇರಿಗಾಗಲಿ ಈ ಬಗ್ಗೆ ಮಾಹಿತಿಯಿಲ್ಲ. ಸೋಲದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಹೇಳಿದರು.

ನರಸಿಂಹ ಮೂರ್ತಿಯವರಿಗೆ ಚಿಕಿತ್ಸೆ ನೀಡಿದ ಡಾ ಸಂತೋಷ್ ಎಸ್ ಮಾತನಾಡಿ, ರಾಜಾಜಿನಗರದ ಇಎಸ್ಐ ಆಸ್ಪತ್ರೆ ಶಿಫಾರಸ್ಸಿನ ಮೇರೆಗೆ ರೋಗಿ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಗೆ ರೋಗಿಬಂದಾಗ ಆಘಾತಕ್ಕೊಳಗಾಗಿದ್ದರು. ಕೈಕಾಲುಗಳು ಚಲನರಹಿತವಾಗಿದ್ದವು. ಹೃದಯ ಸ್ತಂಭನವಾಗಿತ್ತು. ಕಳೆದ 8 ದಿನಗಳಿಂದ ವೆಂಟಿಲೇಟರ್ ಸಪೋರ್ಟ್ ನೀಡಲಾಗಿತ್ತು. ಶನಿವಾರ ಸಂಜೆ ಕುಟುಂಬಸ್ಥರು ಡಿಸ್ಚಾರ್ಚ್ ಮಾಡಿಸಿಕೊಂಡು ಹೋಗಿದ್ದರು. ಆಸ್ಪತ್ರೆಯಿಂದ ಕರೆದುಕೊಂಡು ಹೋದ ಗಂಟೆಗಳಲ್ಲಿ ಮೂರ್ತಿಯವರು ಕೊನೆಯುಸಿರೆಳೆದಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT