ಸಾಂದರ್ಭಿಕ ಚಿತ್ರ 
ರಾಜ್ಯ

ಕನ್ನಡ ರಾಜ್ಯೋತ್ಸವ ವಿಶೇಷ: ಬಿಎಂಆರ್ ಸಿಎಲ್ ನಿಂದ ಕ್ಯೂಆರ್ ಟಿಕೆಟ್ ಖರೀದಿಸುವ ಸೌಲಭ್ಯ

ಕನ್ನಡ ರಾಜ್ಯೋತ್ಸವಕ್ಕೆ ಬಿಎಂಆರ್ ಸಿಎಲ್ ರಾಜ್ಯದ ಜನತೆಗೆ ಉಡುಗೊರೆ ನೀಡಿದ್ದು, ಸಿಂಗಲ್ ಟ್ರಿಪ್ ಕ್ಯೂ ಆರ್ ಟಿಕೆಟ್ ಗಳನ್ನು ವಿತರಣೆ ಮಾಡಲಿದೆ. 

ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಬಿಎಂಆರ್ ಸಿಎಲ್ ರಾಜ್ಯದ ಜನತೆಗೆ ಉಡುಗೊರೆ ನೀಡಿದ್ದು, ಸಿಂಗಲ್ ಟ್ರಿಪ್ ಕ್ಯೂ ಆರ್ ಟಿಕೆಟ್ ಗಳನ್ನು ವಿತರಣೆ ಮಾಡಲಿದೆ. 

ನಂ.1 ರಿಂದ ಎಲ್ಲಾ ಮೆಟ್ರೊ ಸ್ಟೇಷನ್ ಗಳಲ್ಲಿ ಈ ಸೌಲಭ್ಯ ಜಾರಿಗೆ ಬರಲಿದ್ದು, ಆಂಡ್ರಾಯ್ಡ್ ಫೋನ್ ಗಳ ಮೂಲಕ ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. 

ಕ್ಯೂಆರ್ ಕೋಡ್ ಇಲ್ಲದೇ ಇದ್ದಲ್ಲಿ ವಾಟ್ಸ್ ಆಪ್ ನಂ. 810 555 6677 ಮೂಲಕವೂ ಈ ಸೇವೆಗಳನ್ನು ಪಡೆಯಬಹುದಾಗಿದೆ. 

ನಮ್ಮ ಮೆಟ್ರೋ ಆಪ್ ಮೂಲಕ ಕ್ಯೂ ಆರ್ ಟಿಕೆಟ್ ಗಳನ್ನು ಪಡೆಯಬಹುದಾಗಿದೆ ಅಥವಾ ವಾಟ್ಸ್ ಆಪ್ ನಂ.810 555 6677 ಗೆ hi ಎಂಬ ಸಂದೇಶ ಕಳಿಸುವ ಮೂಲಕ ಕ್ಯೂಆರ್ ಟಿಕೆಟ್ ಗಳನ್ನು ಖರೀದಿಸುವ ಪ್ರಕ್ರಿಯೆಗೆ ಚಾಲನೆ ನೀಡಬಹುದಾಗಿದೆ. 

ವಾಟ್ಸ್ ಆಪ್ ಚಾಟ್‌ಬಾಟ್ ಗಳ ಮೂಲಕ ಮೆಟ್ರೋ ಸ್ಮಾರ್ಟ್ ಕಾರ್ಡ್ ಗಳನ್ನೂ ರೀಚಾರ್ಜ್ ಮಾಡಿಸಬಹುದಾಗಿದೆ ಎಂದು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT