ಸಾಂದರ್ಭಿಕ ಚಿತ್ರ 
ರಾಜ್ಯ

ಕನ್ನಡ ರಾಜ್ಯೋತ್ಸವ ವಿಶೇಷ: ಬಿಎಂಆರ್ ಸಿಎಲ್ ನಿಂದ ಕ್ಯೂಆರ್ ಟಿಕೆಟ್ ಖರೀದಿಸುವ ಸೌಲಭ್ಯ

ಕನ್ನಡ ರಾಜ್ಯೋತ್ಸವಕ್ಕೆ ಬಿಎಂಆರ್ ಸಿಎಲ್ ರಾಜ್ಯದ ಜನತೆಗೆ ಉಡುಗೊರೆ ನೀಡಿದ್ದು, ಸಿಂಗಲ್ ಟ್ರಿಪ್ ಕ್ಯೂ ಆರ್ ಟಿಕೆಟ್ ಗಳನ್ನು ವಿತರಣೆ ಮಾಡಲಿದೆ. 

ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಬಿಎಂಆರ್ ಸಿಎಲ್ ರಾಜ್ಯದ ಜನತೆಗೆ ಉಡುಗೊರೆ ನೀಡಿದ್ದು, ಸಿಂಗಲ್ ಟ್ರಿಪ್ ಕ್ಯೂ ಆರ್ ಟಿಕೆಟ್ ಗಳನ್ನು ವಿತರಣೆ ಮಾಡಲಿದೆ. 

ನಂ.1 ರಿಂದ ಎಲ್ಲಾ ಮೆಟ್ರೊ ಸ್ಟೇಷನ್ ಗಳಲ್ಲಿ ಈ ಸೌಲಭ್ಯ ಜಾರಿಗೆ ಬರಲಿದ್ದು, ಆಂಡ್ರಾಯ್ಡ್ ಫೋನ್ ಗಳ ಮೂಲಕ ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. 

ಕ್ಯೂಆರ್ ಕೋಡ್ ಇಲ್ಲದೇ ಇದ್ದಲ್ಲಿ ವಾಟ್ಸ್ ಆಪ್ ನಂ. 810 555 6677 ಮೂಲಕವೂ ಈ ಸೇವೆಗಳನ್ನು ಪಡೆಯಬಹುದಾಗಿದೆ. 

ನಮ್ಮ ಮೆಟ್ರೋ ಆಪ್ ಮೂಲಕ ಕ್ಯೂ ಆರ್ ಟಿಕೆಟ್ ಗಳನ್ನು ಪಡೆಯಬಹುದಾಗಿದೆ ಅಥವಾ ವಾಟ್ಸ್ ಆಪ್ ನಂ.810 555 6677 ಗೆ hi ಎಂಬ ಸಂದೇಶ ಕಳಿಸುವ ಮೂಲಕ ಕ್ಯೂಆರ್ ಟಿಕೆಟ್ ಗಳನ್ನು ಖರೀದಿಸುವ ಪ್ರಕ್ರಿಯೆಗೆ ಚಾಲನೆ ನೀಡಬಹುದಾಗಿದೆ. 

ವಾಟ್ಸ್ ಆಪ್ ಚಾಟ್‌ಬಾಟ್ ಗಳ ಮೂಲಕ ಮೆಟ್ರೋ ಸ್ಮಾರ್ಟ್ ಕಾರ್ಡ್ ಗಳನ್ನೂ ರೀಚಾರ್ಜ್ ಮಾಡಿಸಬಹುದಾಗಿದೆ ಎಂದು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT