ರಾಜ್ಯ

ನಾಳೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಪುನೀತ್ ಕುಟುಂಬಕ್ಕೆ ಸರ್ಕಾರದ ಆಹ್ವಾನ

Nagaraja AB

ಬೆಂಗಳೂರು: ನಾಳೆ ನಡೆಯಲಿರುವ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಅವರ ಕುಟುಂಬಕ್ಕೆ ಸರ್ಕಾರದಿಂದ ಇಂದು ಅಧಿಕೃತ ಆಹ್ವಾನ ನೀಡಲಾಯಿತು.

ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿನ ಸರ್ಕಾರದ ಪ್ರತಿನಿಧಿಗಳು, ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿತು.  ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಇಲಾಖೆ ಕಾರ್ಯದರ್ಶಿ ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.

ನಂತರ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿರುವ ಇನ್ಫೋಸಿಸ್ ಫೌಂಡೇಷನ್ ಸಂಸ್ಥಾಪಕಿ ಸುಧಾ ನಾರಾಯಣ ಮೂರ್ತಿ ಅವರಿಗೂ ಅಧಿಕೃತವಾಗಿ ಆಹ್ವಾನ ನೀಡಲಾಯಿತು. 

SCROLL FOR NEXT