ಬ್ರಿಟನ್ ಪ್ರಧಾನಿ ರಿಷಿ ಸುನಕ್ 
ರಾಜ್ಯ

ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ನಿಧನಕ್ಕೆ ಸಂತಾಪ ಸಂದೇಶ ಕಳುಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಬಯೋಕಾನ್ ಕಾರ್ಯಕಾರಿ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರ ಪತಿ ಜಾನ್ ಶಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಸಂದೇಶವನ್ನು ಸುನಕ್ ಅವರ ಸೋದರ ಮಾವ ರೋಹನ್ ಮೂರ್ತಿ ಅವರು ಭಾನುವಾರ ಸಂಜೆ ಬೆಂಗಳೂರಿನಲ್ಲಿ ಓದಿದರು.

ಬೆಂಗಳೂರು: ಬಯೋಕಾನ್ ಕಾರ್ಯಕಾರಿ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರ ಪತಿ ಜಾನ್ ಶಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಸಂದೇಶವನ್ನು ಸುನಕ್ ಅವರ ಸೋದರ ಮಾವ ರೋಹನ್ ಮೂರ್ತಿ ಅವರು ಭಾನುವಾರ ಸಂಜೆ ಬೆಂಗಳೂರಿನಲ್ಲಿ ಓದಿದರು.

ಐದು ದಿನಗಳ ಹಿಂದಷ್ಟೇ ನಿಧನರಾದ ಜಾನ್ ಶಾ ಅವರ ಸ್ಮರಣಾರ್ಥ ಕಿರಣ್ ಮಜುಂದಾರ್ ಶಾ ಅವರು ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಸಭೆಯಲ್ಲಿ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು, ತಮ್ಮ ಮಗಳು ಅಕ್ಷತಾ ಮೂರ್ತಿ ಮತ್ತು ರಿಷಿ ಸುನಕ್ ಅವರ ಮದುವೆಯಲ್ಲಿ ಜಾನ್ ಶಾ ಅವರೇ ಆರತಿ ಮಾಡಿದ್ದರು ಎಂದು ನೆನಪಿಸಿಕೊಂಡರು. ಮದುವೆಗೂ ಮುನ್ನ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಜಾನ್ ಶಾ ಸೇರುವವರೆಗೂ ಮಾತ್ರ ಅಬ್ಬರ ಮಾಡುತ್ತಾ ಪಂಜಾಬಿಗಳು ಮೇಲುಗೈ ಸಾಧಿಸುತ್ತಿದ್ದರು ಎಂದು ರೋಹನ್ ಹೇಳಿದರು.

ನಾರಾಯಣ ಹೃದಯಾಲಯದ ಸಿಇಒ ಡಾ. ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಕಿರಣ್ ಮಜುಂದಾರ್ ಶಾ ಅವರ ಕಾರಣದಿಂದಾಗಿ ಜಾನ್ ಶಾ ಅವರು 15 ವರ್ಷಗಳ ಹಿಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.

ಯುಐಡಿಎಐ ಮಾಜಿ ಅಧ್ಯಕ್ಷ ನಂದನ್ ನಿಲೇಕಣಿ ಅವರು ಜಾನ್ ಶಾ ಅವರೊಂದಿಗಿನ ತಮ್ಮ ನಿಕಟ ಸ್ನೇಹವನ್ನು ನೆನಪಿಸಿಕೊಂಡರು ಮತ್ತು ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಹತ್ತಿರವಾಗಿದ್ದ ಅವರು, ಐದು ಜೋಡಿಗಳ ತಂಡಗಳನ್ನು ರಚಿಸಿದರು ಮತ್ತು ತಮ್ಮನ್ನು ಬ್ಲ್ಯಾಕ್ ಪ್ಯಾಂಥರ್ಸ್ ಎಂದು ಹೆಸರಿಸಿದ್ದರು ಎಂದು ಹೇಳಿದರು.

ಪ್ರಾರ್ಥನಾ ಸಭೆಯಲ್ಲಿ ಕೇಂದ್ರದ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.

ಬಯೋಕಾನ್ ತನ್ನ ವೆಬ್‌ಸೈಟ್‌ನಲ್ಲಿ, 'ಜಾನ್ ಶಾ ಅವರು ಸಣ್ಣ ಬಯೋಕಾನ್ ಕಂಪನಿಯನ್ನು ಜಾಗತಿಕವಾಗಿ ಗುರುತಿಸಲ್ಪಟ್ಟ ಬಯೋಫಾರ್ಮಾಸ್ಯುಟಿಕಲ್ ಕಂಪನಿಯಾಗಿ ಪರಿವರ್ತಿಸಲು ಪ್ರಮುಖವಾಗಿ ಕೊಡುಗೆ ನೀಡಿದ್ದಾರೆ ಮತ್ತು ಕಂಪನಿಯಲ್ಲಿ ಉನ್ನತ ಮಟ್ಟದ ಕಾರ್ಪೊರೇಟ್ ಆಡಳಿತವನ್ನು ಖಾತ್ರಿಪಡಿಸುವಲ್ಲಿ ಮತ್ತು ಸಂಸ್ಥೆಯ ಆರ್ಥಿಕ ಮತ್ತು ಕಾರ್ಯತಂತ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದೆ.

ಅವರು ವಿದೇಶಿ ಪ್ರವರ್ತಕರಾಗಿದ್ದರು ಮತ್ತು ವಿವಿಧ ಬಯೋಕಾನ್ ಗ್ರೂಪ್ ಕಂಪನಿಗಳ ಮಂಡಳಿಯಲ್ಲಿದ್ದರು. ಅಲ್ಲದೆ, ಮಧುರಾ ಕೋಟ್ಸ್‌ನ ಮಾಜಿ ಅಧ್ಯಕ್ಷರು ಮತ್ತು ವಿಯೆಲ್ಲಾ ಗ್ರೂಪ್‌ನ ಕೋಟ್ಸ್‌ನ ಮಾಜಿ ಹಣಕಾಸು ಮತ್ತು ವ್ಯವಸ್ಥಾಪಕ ನಿರ್ದೇಶಕರೂ ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT