ಕೊಡಗು ಪ್ರವಾಹ (ಸಂಗ್ರಹ ಚಿತ್ರ) 
ರಾಜ್ಯ

ಮಡಿಕೇರಿ: ಕೊಯನಾಡು ಪ್ರವಾಹ ಸಂತ್ರಸ್ತರಿಂದ ಆತ್ಮಹತ್ಯೆ ಎಚ್ಚರಿಕೆ

ಕೊಡಗಿನಲ್ಲಿ ಧಾರಾಕಾರ ಮಳೆಯ ಪರಿಣಾಮ ಜುಲೈ ತಿಂಗಳಿನಿಂದ ಪ್ರವಾಹ ಉಂಟಾಗಿದ್ದು, ಹಲವು ಮನೆಗಳಿಗೆ ಭಾಗಶಃ ಹಾನಿಯುಂಟಾಗಿದೆ. 

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆಯ ಪರಿಣಾಮ ಜುಲೈ ತಿಂಗಳಿನಿಂದ ಪ್ರವಾಹ ಉಂಟಾಗಿದ್ದು, ಹಲವು ಮನೆಗಳಿಗೆ ಭಾಗಶಃ ಹಾನಿಯುಂಟಾಗಿದೆ. 

ಸಂಪಾಜೆ ವ್ಯಾಪ್ತಿಯ ಕೊಯನಾಡು ಪ್ರದೇಶದಲ್ಲಿ ಪ್ರವಾಹ ಎದುರಿಸುತ್ತಿರುವ ಮಂದಿಯ ಪೈಕಿ ಹಲವರು ಎಸ್ಟೇಟ್ ಕಾರ್ಮಿಕರಾಗಿದ್ದು, ತಮ್ಮ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಕೊಯನಾಡು ಪ್ರದೇಶದ ಪಯಸ್ವಿನಿ ನದಿ ಹರಿವು ಜುಲೈ ತಿಂಗಳಲ್ಲಿ ಎಂದಿಗಿಂತ ನಾಲ್ಕು ಪಟ್ಟು ಹೆಚ್ಚಳವಾಗಿತ್ತು ಹಾಗೂ ಆಗಸ್ಟ್ ತಿಂಗಳಲ್ಲಿಯೂ ಇದು ಮುಂದುವರೆದಿತ್ತು. 

ನದಿಯ ತಗ್ಗುಪ್ರದೇಶದಲ್ಲಿ ವಾಸಿಸುತ್ತಿರುವ 5 ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಜೀವಮಾನದ ದುಡಿಮೆ- ಸಂಗ್ರಹವನ್ನು ಪ್ರವಾಹದ ಸಂದರ್ಭದಲ್ಲಿ ಕಳೆದುಕೊಂಡಿದ್ದು, ಇವರಿಗೆ ಮೂಲಭೂತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಲಾಗಿತ್ತು.

ಆದರೆ ಪರಿಹಾರವನ್ನು ನಿರಾಕರಿಸುತ್ತಿರುವ ನಿವಾಸಿಗಳು, ಇದರ ಬದಲಿಗೆ ಪಯಸ್ವಿನಿ ನದಿಯಾದ್ಯಂತ ಕಟ್ಟಲಾಗಿರುವ ಚೆಕ್ ಡ್ಯಾಮ್ ನ್ನು ತೆರವುಗೊಳಿಸಬೇಕೆಂಬ ಬೇಡಿಕೆ ಮುಂದಿಟ್ಟಿದ್ದಾರೆ.

ನದಿಯ ಇತ್ತೀಚಿನ ಪ್ರವಾಹಕ್ಕೆ 8 ಕುಟುಂಬಗಳು ಸಂತ್ರಸ್ತ ಕುಟುಂಬಗಳಾಗಿವೆ, ನದಿಗೆ ಕಟ್ಟಲಾಗಿರುವ ಚೆಕ್ ಡ್ಯಾಮ್ ಸಹ ಪ್ರವಾಹಕ್ಕೆ ಒಂದು ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಡ್ಯಾಮ್ ನ್ನು ತೆರವುಗೊಳಿಸಿ ಇಲ್ಲದೇ ಇದ್ದಲ್ಲಿ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕುಟುಂಬಗಳು ಆಗ್ರಹಿಸಿವೆ.
 
ಇತ್ತೀಚೆಗೆ ಪ್ರವಾಹ ಉಂಟಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಕೆಜಿ ಬೋಪಯ್ಯ ಎದುರು ಈ ಬೇಡಿಕೆ ಮುಂದಿಟ್ಟಿದ್ದು, ಗ್ರಾಮಸ್ಥರು ಈ ಚೆಕ್ ಡ್ಯಾಮ್ ನ್ನು ಅವೈಜ್ಞಾನಿಕ ಎಂದು ಆರೋಪಿಸಿದ್ದಾರೆ. ಆದರೆ ಎಂಎಲ್ಎ ಬೋಪಯ್ಯ, ಚೆಕ್ ಡ್ಯಾಮ್ ನಿಂದ ಈ ಪ್ರದೇಶದಲ್ಲಿ 30 ಕ್ಕೂ ಹೆಚ್ಚು ಮಂದಿಗೆ ಉಪಯೋಗವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT