ಸಾಂದರ್ಭಿಕ ಚಿತ್ರ 
ರಾಜ್ಯ

ಓವರ್ ಟೇಕ್ ಮಾಡುವ ಹುಚ್ಚಾಟ: ಸಾರಿಗೆ ಸಂಸ್ಥೆ ಬಸ್ ಮತ್ತು 2 ಕಾರುಗಳ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರ ಸಾವು

ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.

ವಿಜಯಪುರ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.

ಕಲಬುರಗಿ ಮೂಲದ ಕಲಶೆಟ್ಟಿ ಕುಟುಂಬದವರಾದ ತಾಯಿ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ( 25) ಹಾಗೂ ಮಗು ಸುಮನ್ (3 ತಿಂಗಳು) ಕಾರಿನಲ್ಲೇ ಮೃತಪಟ್ಟರೇ ಶರಣಮ್ಮ ಬಸವರಾಜ್ ಕಲಶೆಟ್ಟಿ (55) ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಉಮೇಶ ಕಲಶೆಟ್ಟಿ ಮತ್ತು ಅವರ ಪತ್ನಿ ಸುರೇಖಾ ಹಾಗೂ ಮಕ್ಕಳಾದ ಸುಹಾನ್ (8 ತಿಂಗಳು) ಮತ್ತು ಸಾನ್ವಿ (2) ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆಯಿಂದ ವಿಜಯಪುರಕ್ಕೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿಗೆ ಬರುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಓವರ್ ಟೇಕ್ ಮಾಡುವ ವೇಳೆ ಎರಡು ಕಾರುಗಳು ಬಸ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ  ತೀವ್ರವಾಗಿ ಗಾಯಗೊಂಡಿರುವ ಉಮೇಶ ಕಲಶಟ್ಟಿ, ಸುರೇಖಾ ಕಲಶಟ್ಟಿ ಇವರನ್ನು ತುರ್ತು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ  ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೊಲ್ಹಾರ ಪಿಎಸ್ಐ ಪ್ರೀತಮ್ ನಾಯಕ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT