ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ 1.59 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ

ಕೆರೆಗಳು, ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್‌ಗಳು ಸೇರಿದಂತೆ ನಿಗದಿತ ಸ್ಥಳಗಳಲ್ಲಿ ಬುಧವಾರ ಒಟ್ಟು 1.59 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು.

ಬೆಂಗಳೂರು: ಕೆರೆಗಳು, ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್‌ಗಳು ಸೇರಿದಂತೆ ನಿಗದಿತ ಸ್ಥಳಗಳಲ್ಲಿ ಬುಧವಾರ ಒಟ್ಟು 1.59 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಬಿಬಿಎಂಪಿ ಪ್ರಕಾರ, ಹಬ್ಬದ ದಿನದಂದು ಪೂಜೆಯ ನಂತರ ಪಾಲಿಕೆಯ ಎಂಟು ವಲಯಗಳಲ್ಲಿ 1,59,980 ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಬಳಕೆಗೆ ನಿಷೇಧವಿದ್ದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ 12,000  ಮೂರ್ತಿಗಳು ಪತ್ತೆಯಾಗಿವೆ. ಆದಾಗ್ಯೂ, ಅಧಿಕಾರಿಗಳು ಅಂತಹ ವಿಗ್ರಹಗಳು ಜಲಮೂಲಗಳಲ್ಲಿ ವಿಸರ್ಜನೆಯಾಗದಂತೆ ತಡೆದು ಬೇರೆಡೆ ವ್ಯವಸ್ಥೆ ಮಾಡಿದರು.

ಆ.31ರಂದು ಸಂಚಾರಿ/ ಮೊಬೈಲ್ ಟ್ಯಾಂಕರ್ ಹಾಗೂ ಕಲ್ಯಾಣಿ/ ಹೊಂಡಗಳಲ್ಲಿ ಒಟ್ಟು 1,59,980 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅತಿ ಹೆಚ್ಚು ಮಣ್ಣಿನ ಮೂರ್ತಿಗಳು (68,521) ದಕ್ಷಿಣ ವಲಯದಲ್ಲಿ ವಿಸರ್ಜನೆಯಾಗಿದ್ದು, ಇದೇ ವಲಯದಲ್ಲಿ ಅತಿ ಹೆಚ್ಚು ಪಿಒಪಿ ಮೂರ್ತಿಗಳೂ (11,402) ವಿಸರ್ಜನೆಯಾಗಿವೆ.

ಪಶ್ಚಿಮ ವಲಯ (306) ಇದೆ. ಆರ್‌.ಆರ್‌. ನಗರ– 152, ಬೊಮ್ಮನಹಳ್ಳಿ– 131, ಯಲಹಂಕ– 73, ದಾಸರಹಳ್ಳಿ ವಲಯದಲ್ಲಿ 22 ಪಿಒಪಿ ಮೂರ್ತಿಗಳು ವಿಸರ್ಜನೆಯಾಗಿವೆ. ಪೂರ್ವ ಹಾಗೂ ಮಹದೇವಪುರ ವಲಯಲದಲ್ಲಿ ಪಿಒಪಿ ಮೂರ್ತಿಗಳು ವಿಸರ್ಜನೆಯಾಗಿಲ್ಲ. ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಮಣ್ಣಿನ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು. ಯಡಿಯೂರು ಕೆರೆಯಲ್ಲಿ 68,521 ವಿಗ್ರಹಗಳನ್ನು ವಿಸರ್ಜನೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT