ಬೇಗೂರು ಕೆರೆ 
ರಾಜ್ಯ

ಬೆಂಗಳೂರು: ಬೇಗೂರು ಕೆರೆ ಸುತ್ತಮುತ್ತ 33 ಒತ್ತುವರಿಗಳ ತೆರವು

ಬೇಗೂರು ಕೆರೆಯ ಸುತ್ತಮುತ್ತ 81 ಜಾಗಗಳು ಒತ್ತುವರಿಯಾಗಿರುವುದು ಸಮೀಕ್ಷೆಯಲ್ಲಿ  ಬೆಳಕಿಗೆ ಬಂದಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುರುವಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. 

ಬೆಂಗಳೂರು:  ಬೇಗೂರು ಕೆರೆಯ ಸುತ್ತಮುತ್ತ 81 ಜಾಗಗಳು ಒತ್ತುವರಿಯಾಗಿರುವುದು ಸಮೀಕ್ಷೆಯಲ್ಲಿ  ಬೆಳಕಿಗೆ ಬಂದಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುರುವಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. 

ನ್ಯಾಯಾಲಯದ ನಿರ್ದೇಶನದಂತೆ  ಜುಲೈ 26, 2022 ರಂದು ಸರ್ವೆ ನಡೆಸಿ ಅತಿಕ್ರಮಣಗೊಂಡಿರುವ ಕೆರೆಯ ಭಾಗವನ್ನು ಗುರುತಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಬಿಬಿಎಂಪಿ ಕಾರ್ಯಕಾರಿ ಎಂಜಿನಿಯರ್  ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವನಾಥ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಅಫಿಡವಿಟ್ ಸಲ್ಲಿಸಿದ್ದಾರೆ. 

ಜುಲೈ 27, 2022 ರಂದು ಎಲ್ಲಾ ಅತಿಕ್ರಮಣದಾರರಿಗೆ/ಅನಧಿಕೃತ ನಿವಾಸಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.  81 ಒತ್ತುವರಿಗಳ ಪೈಕಿ 33 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ,  ಕೆಡವಲಾದ ಅನಧಿಕೃತ ನಿರ್ಮಾಣಗಳ ಛಾಯಾಚಿತ್ರಗಳನ್ನು ಸಹ ಸಲ್ಲಿಸಿದ್ದಾರೆ. 

45 ಅತಿಕ್ರಮಣದಾರರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದಂತೆ ಯಾವುದೇ  ಕ್ರಮ  ತೆಗೆದುಕೊಳ್ಳದಂತೆ ನಿಯೋಜಿತ ಅಧಿಕಾರಿ (ಕಾರ್ಯನಿರ್ವಾಹಕ ಇಂಜಿನಿಯರ್) ವಿರುದ್ಧ ತಡೆಯಾಜ್ಞೆ ಪಡೆದಿದ್ದಾರೆ ಎಂದು ಕಾರ್ಯಪಾಲಕ ಎಂಜಿನಿಯರ್ ನ್ಯಾಯಾಲಯಕ್ಕೆ ತಿಳಿಸಿದರು. ನಿಷೇಧಾಜ್ಞೆ ಆದೇಶದ ವಿರುದ್ಧವೂ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ.

2014 ರಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಮೂಲಕ ಅತಿಕ್ರಮಣಗಳ ತೆರವು ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಅರ್ಜಿದಾರರು ಅಫಿಡವಿಟ್‌ಗೆ ಯಾವುದೇ ದೂರುಗಳಿದ್ದಲ್ಲಿ ಅವುಗಳನ್ನು ಸಲ್ಲಿಸುವಂತೆ ತಿಳಿಸಿ, ವಿಚಾರಣೆಯನ್ನು ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

PoK: ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

SCROLL FOR NEXT