ಯುವಕ ನೀರು ಪಾಲು 
ರಾಜ್ಯ

ಧಾರವಾಡ: ಬೆಣ್ಣಿಹಳ್ಳ ಹೊಳೆಯಲ್ಲಿ ಮತ್ತೊಬ್ಬ ಯುವಕ ಮುಳುಗಿ ಸಾವು

ಬೆಣ್ಣಿಹಳ್ಳ ಹೊಳೆಯಲ್ಲಿ ಮತ್ತೊಬ್ಬ ಯುವಕ ಮುಳುಗಿ ಸಾವನ್ನಪ್ಪಿದ್ದು, ಇದು ಇತ್ತೀಚೆಗೆ ದಾಖಲಾದ 2ನೇ ಪ್ರಕರಣವಾಗಿದೆ.

ಧಾರವಾಡ: ಬೆಣ್ಣಿಹಳ್ಳ ಹೊಳೆಯಲ್ಲಿ ಮತ್ತೊಬ್ಬ ಯುವಕ ಮುಳುಗಿ ಸಾವನ್ನಪ್ಪಿದ್ದು, ಇದು ಇತ್ತೀಚೆಗೆ ದಾಖಲಾದ 2ನೇ ಪ್ರಕರಣವಾಗಿದೆ.

ಹೌದು.. ಹುಬ್ಬಳ್ಳಿ ಸಮೀಪದ ಇಂಗಳಹಳ್ಳಿ ಗ್ರಾಮದ ಹೊಳೆಗೆ ಇತ್ತೀಚೆಗೆ ಕೊಚ್ಚಿಕೊಂಡು ಹೋಗಿದ್ದ ನಾಪತ್ತೆಯಾದವರ ಪತ್ತೆಗೆ ಧಾರವಾಡ ಜಿಲ್ಲಾಡಳಿತ ಹರಸಾಹಸ ಪಡುತ್ತಿರುವಂತೆಯೇ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ್ ಗ್ರಾಮದಲ್ಲಿ ಶುಕ್ರವಾರ ಮತ್ತೊಬ್ಬ ಯುವಕ ಅದೇ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾನೆ.

ಶುಕ್ರವಾರ ನವಲಗುಂದ ತಾಲೂಕಿನ ತಡಹಾಳ್ ಗ್ರಾಮದ ಬೆಣ್ಣಿಹಳ್ಳ ಹೊಳೆಯಲ್ಲಿ ಸದಾನಂದ ಪೂಜಾರ್ (22 ವರ್ಷ) ಕೊಚ್ಚಿ ಹೋಗಿದ್ದಾರೆ. ಗ್ರಾಮದ ಬಳಿಯ ಸೇತುವೆಯ ಮೇಲೆ ಯುವಕರು ಹೋಗುತ್ತಿದ್ದಾಗ ಏಕಾಏಕಿ ಹೊಳೆ ನೀರಿನ ಮಟ್ಟ ಏರಿದೆ. ಈ ವೇಳೆ ನೀರಿಗೆ ಸಿಲುಕಿದ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಕೂಡಲೇ ಅಲ್ಲಿದ್ದ ಯುವಕರು ಕೂಡಲೇ ಈಜುವ ಮೂಲಕ ಆತನನ್ನು ರಕ್ಷಿಸಲು ಹರಸಾಹಸ ಪಟ್ಟರಾದರೂ ಯುವಕ ಮುಳುಗಿ ಹೋಗಿದ್ದ ಎಂದು ನವಲಗುಂದ ಪೊಲೀಸರು ತಿಳಿಸಿದ್ದಾರೆ. 

ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದವರು ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.29ರಂದು ಬೆಣ್ಣೆಹಳ್ಳ ಹೊಳೆ ಪ್ರವಾಹದಲ್ಲಿ ಇಂಗಳಹಳ್ಳಿಯ ಆನಂದ್ ಹಿರೇಗೌಡರ್ (24 ವರ್ಷ) ಕೊಚ್ಚಿ ಹೋಗಿದ್ದು, ಕಳೆದ ಐದು ದಿನಗಳಿಂದ ಶೋಧ ಕಾರ್ಯ ನಡೆಯುತ್ತಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರಿಗೆ ಸುಳಿವು ಸಿಕ್ಕಿಲ್ಲ. ಗ್ರಾಮಸ್ಥರ ನೆರವಿನೊಂದಿಗೆ ಶನಿವಾರವೂ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT