ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶ್ರೀಗಳು 
ರಾಜ್ಯ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೆಪ್ಟೆಂಬರ್ 5 ರವರೆಗೆ ಮುರುಘಾ ಶ್ರೀ ಪೊಲೀಸ್ ವಶಕ್ಕೆ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸರ ವಶಕ್ಕೆ...

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಆರು ದಿನಗಳ ನಂತರ ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಚಿತ್ರದುರ್ಗ ಪೊಲೀಸರು ಅವರನ್ನು ಬಂಧಿಸಿದ್ದರು. ಇಂದು ಆರೋಪಿ ಶ್ರೀಗಳನ್ನು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.

ಈ ವೇಳೆ ಆರೋಪಿ ಶ್ರೀಗಳನ್ನು ವಿಚಾರಣೆಗಾಗಿ ಐದು ದಿನ ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದರು. ಆದರೆ ಕೋರ್ಟ್ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.

ಇಂದು ಬೆಳಗ್ಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸತತ 2 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಿದ ಮೂವರು ವೈದ್ಯರ ತಂಡ. ಚೆಸ್ಟ್ ಸ್ಕ್ಯಾನ್, ಇಸಿಜಿ, ಎಕೊ, ಎಂ ಆರ್ ಐ ಸ್ಕ್ಯಾನ್ ಹೀಗೆ ಹಲವು ಪರೀಕ್ಷೆಗಳನ್ನು ನಡೆಸಿದರು. ಶ್ರೀಗಳು ಎದೆನೋವು ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ ಸೂಕ್ಷ್ಮ ಪರಿಸ್ಥಿತಿಯಲ್ಲಿರುವುದರಿಂದ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT