ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನೀರು ಪೂರೈಕೆ ಸ್ಥಗಿತ; ಮಹಿಳೆಗೆ 55,000 ರೂ. ಪರಿಹಾರ ಪಾವತಿಸುವಂತೆ ಬಿಡಬ್ಲ್ಯುಎಸ್‌ಎಸ್‌ಬಿಗೆ ನಿರ್ದೇಶನ

2018ರಿಂದಲೂ ಪದೇ ಪದೇ ಮನವಿ ಮಾಡಿದರೂ ದೋಷಪೂರಿತ ಮೀಟರ್ ಬದಲಾಯಿಸದೆ ಮಹಿಳೆಗೆ ನೀರು ಪೂರೈಕೆಯನ್ನು ಸ್ಥಗಿತಗೊಳಿಸಿದ್ದಕ್ಕೆ ಬಿಡಬ್ಲ್ಯುಎಸ್‌ಎಸ್‌ಬಿ ಮಲ್ಲೇಶ್ವರಂನ ಮಹಿಳೆಯೊಬ್ಬರಿಗೆ ರೂ.55,000 ಪಾವತಿಸುವಂತಾಗಿದೆ.

ಬೆಂಗಳೂರು: 2018ರಿಂದಲೂ ಪದೇ ಪದೇ ಮನವಿ ಮಾಡಿದರೂ ದೋಷಪೂರಿತ ಮೀಟರ್ ಬದಲಾಯಿಸದೆ ಮಹಿಳೆಗೆ ನೀರು ಪೂರೈಕೆಯನ್ನು ಸ್ಥಗಿತಗೊಳಿಸಿದ್ದಕ್ಕೆ ಬಿಡಬ್ಲ್ಯುಎಸ್‌ಎಸ್‌ಬಿ ಮಲ್ಲೇಶ್ವರಂನ ಮಹಿಳೆಯೊಬ್ಬರಿಗೆ ರೂ.55,000 ಪಾವತಿಸುವಂತಾಗಿದೆ.

ದೂರುದಾರರಾದ  53 ವರ್ಷದ ಸದಾಶಿವಮ್ಮ ಅವರಿಗೆ 50, 000 ಪರಿಹಾರ, ಕಾನೂನು ಹೋರಾಟಕ್ಕೆ ತಗುಲಿದ 5 ಸಾವಿರ ವೆಚ್ಚ ಸೇರಿದಂತೆ ಒಟ್ಟಾರೇ ರೂ. 55,000 ಪಾವತಿಸುವಂತೆ ಬೆಂಗಳೂರು ನಗರ ಎರಡನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ, ಬಿಡಬ್ಲ್ಯೂಎಸ್ ಎಸ್ ಬಿಗೆ  ನಿರ್ದೇಶಿಸಿದೆ.

ಅಧ್ಯಕ್ಷರಾದ ಎಂ.ಶೋಭಾ, ಸದಸ್ಯರಾದ ಬಿ ದೇವರಾಜ್ ಮತ್ತು ವಿ ಅನುರಾಧಾ ಅವರನ್ನೊಳಗೊಂಡ ಆಯೋಗ, ಈ ತೀರ್ಪು ನೀಡಿದ್ದು, ಕೂಡಲೇ ದೋಷಪೂರಿತ ಮೀಟರ್ ಬದಲಾಯಿಸಿ, ದೂರುದಾರ ಮಹಿಳೆ ಮನೆಗೆ ಮತ್ತೆ ನೀರು ಪೂರೈಸುವಂತೆ ಮಂಡಳಿಗೆ ಸೂಚಿಸಿದೆ.  

ದೂರುದಾರ ಮಹಿಳೆ ರೂ. 1,91,826 ರೂ. ಪಾವತಿಸಬೇಕಾಗಿದೆ ಎಂದು ಬಿಡಬ್ಲ್ಯೂಎಸ್ ಎಸ್ ಬಿ ಹೇಳಿತ್ತು. ಆದರೆ, ದೂರುದಾರ ಮಹಿಳೆ ಬಳಿ ಇರುವ ದಾಖಲೆಗಳ ಪ್ರಕಾರ ಬಿಡಬ್ಲ್ಯೂಎಸ್ ಎಸ್ ಬಿ ತಪ್ಪೇ ಹೆಚ್ಚಾಗಿ ಕಂಡುಬಂದಿದ್ದು, ಆಕೆ ಯಾವುದೇ ಹಣ ಪಾವತಿಸಬೇಕಾಗಿಲ್ಲ ಎಂದು ಆಯೋಗ ಹೇಳಿತು. ಆದೇಶದ ಪ್ರಕಾರ, ದೂರುದಾರ ಮಹಿಳೆ ಪ್ರತಿ ತಿಂಗಳು ನೀರಿನ ಶುಲ್ಕವಾಗಿ ರೂ. 100 ರಿಂದ 200 ಕಟ್ಟುತ್ತಿದ್ದರು. ಆದರೆ, ಮೀಟರ್ ದೂಷದಿಂದಾಗಿ  ಪ್ರತಿ ತಿಂಗಳು 2,000 ದಿಂದ 3,0000 ನೀರಿನ ಬಿಲ್ ಬರುತ್ತಿದೆ ಎಂದು ಆಗಸ್ಟ್ 2018ರಲ್ಲಿ ಆಕೆ ಮನವಿ ಸಲ್ಲಿಸಿದ್ದಳು.

ಮೀಟರ್ ಸ್ಥಗಿತಗೊಂಡಿದ್ದು, ಜನವರಿ 2017 ರಿಂದಲೂ ಬಿಡಬ್ಲ್ಯೂಎಸ್ ಎಸ್ ಬಿಯಿಂದ ನೀರು ಪಡೆದಿಲ್ಲ, ಮತ್ತೆ ನೀರಿನ ವ್ಯವಸ್ಥೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಆಕೆ ಬೋರ್ ವೆಲ್ ನೀರನ್ನು ಉಪಯೋಗಿಸುತ್ತಿಲ್ಲ, ವಾಣಿಜ್ಯ ಉದ್ದೇಶಕ್ಕೂ ನೀರನ್ನು ಬಳಸುತ್ತಿಲ್ಲ ಎಂದು ಮಹಿಳೆ ಸ್ಪಷ್ಪಪಡಿಸಿದ್ದರು.

ಆದರೂ, ಆಕೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಬಿಡಬ್ಲ್ಯೂಎಸ್ ಎಸ್ ಬಿ ಪರಿಗಣಿಸಿರಲಿಲ್ಲ, ಕೆ ರೂ. 1,91,826 ನೀರಿನ ಬಿಲ್ ಕಟ್ಟಬೇಕೆಂದು ಮಂಡಳಿ ಬೆದರಿಕೆ ಹಾಕಿತ್ತು. ಇದರಿಂದ ಮಹಿಳೆ ಆಯೋಗದ ಮೆಟ್ಟಿಲೇರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!