ತ್ರದುರ್ಗದ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರನ್ನು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 
ರಾಜ್ಯ

ಪೋಕ್ಸೋ ಕೇಸಿನಡಿ ಜೈಲು ಸೇರಿದ ಮುರುಘಾ ಶರಣರು: ಹಂಗಾಮಿ ಪೀಠಾಧಿಪತಿಯಾಗಿ ಹೆಬ್ಬಾಳು ಮಠದ ಮಹಾಂತ ರುದ್ರಸ್ವಾಮಿ ನೇಮಕ

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶಿವಾಚಾರ್ಯ ಮುರುಘಾ ಸ್ವಾಮೀಜಿ ಬಂಧನವಾಗಿದೆ. ಹಾಗೆಂದು ಮಠದ ದಿನನಿತ್ಯದ ಪೂಜೆ-ಪುನಸ್ಕಾರ, ಕೆಲಸ ಕಾರ್ಯ ವ್ಯವಹಾರಗಳು ನಿಲ್ಲುವ ಹಾಗಿಲ್ಲ. ಹೀಗಾಗಿ ಮುರುಘಾ ಮಠದ ವ್ಯಾಪ್ತಿಗೆ ಬರುವ ಹೆಬ್ಬಾಳು ಮಠದ ಮಹಾಂತ ರುದ್ರಸ್ವಾಮೀಜಿಗೆ ಮಠದ ಜವಾಬ್ದಾರಿಯನ್ನು ವಹಿಸಲಾಗಿದೆ.

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶಿವಾಚಾರ್ಯ ಮುರುಘಾ ಸ್ವಾಮೀಜಿ ಬಂಧನವಾಗಿದೆ. ಹಾಗೆಂದು ಮಠದ ದಿನನಿತ್ಯದ ಪೂಜೆ-ಪುನಸ್ಕಾರ, ಕೆಲಸ ಕಾರ್ಯ ವ್ಯವಹಾರಗಳು ನಿಲ್ಲುವ ಹಾಗಿಲ್ಲ. ಹೀಗಾಗಿ ಮುರುಘಾ ಮಠದ ವ್ಯಾಪ್ತಿಗೆ ಬರುವ ಹೆಬ್ಬಾಳು ಮಠದ ಮಹಾಂತ ರುದ್ರಸ್ವಾಮೀಜಿಗೆ ಮಠದ ಜವಾಬ್ದಾರಿಯನ್ನು ವಹಿಸಲಾಗಿದೆ.

ಮಹಾಂತ ರುದ್ರಸ್ವಾಮೀಜಿ ಅವರು ಮಠದ ಹಂಗಾಮಿ ಮುಖ್ಯಸ್ಥರಾಗಿ ಮಠದ ದೈನಂದಿನ ಚಟುವಟಿಕೆಗಳನ್ನು ನೋಡಿಕೊಳ್ಳುತ್ತಾರೆ. ಮಠದ ಶಿಕ್ಷಣ ಸಂಸ್ಥೆಗಳು, ಕಾರ್ಯಕ್ರಮಗಳು, ಸಮಾಜ ಸೇವಾ ಉಪಕ್ರಮಗಳು ಮತ್ತು ಇತರ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗುತ್ತಾರೆ.

ಮುರುಘಾ ಮಠ ಶಾಲೆಗಳು ಮತ್ತು ಕಾಲೇಜುಗಳನ್ನು ನಡೆಸುತ್ತದೆ, ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸುತ್ತದೆ. ಹೆಚ್ಚಿನ ಸಂಖ್ಯೆಯ ಆಸ್ತಿಗಳನ್ನು ಹೊಂದಿದೆ, ಅವುಗಳನ್ನು ರಕ್ಷಿಸಬೇಕಾಗಿದೆ ಎಂದು ಮಠದ ಮೂಲಗಳು ಹೇಳುತ್ತವೆ. 

ಮುರುಘಾ ಮಠದ ಶಾಖೆಯಾದ ಹೆಬ್ಬಾಳು ರುದ್ರಸ್ವಾಮಿ ಮಠದ ಉಸ್ತುವಾರಿ ವಹಿಸಿರುವ ಮಹಾಂತ ರುದ್ರಸ್ವಾಮೀಜಿ ಅವರ ಹಿರಿತನವನ್ನು ಪರಿಗಣಿಸಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಸಮಾಜ ಸೇವಕ ಅನಿತ್ ಕುಮಾರ್ ಜಿಎಸ್ ಅವರನ್ನು ಸ್ವಾಮೀಜಿಗಳ ಆಪ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT