ತ್ರದುರ್ಗದ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರನ್ನು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 
ರಾಜ್ಯ

ಪೋಕ್ಸೋ ಕೇಸಿನಡಿ ಜೈಲು ಸೇರಿದ ಮುರುಘಾ ಶರಣರು: ಹಂಗಾಮಿ ಪೀಠಾಧಿಪತಿಯಾಗಿ ಹೆಬ್ಬಾಳು ಮಠದ ಮಹಾಂತ ರುದ್ರಸ್ವಾಮಿ ನೇಮಕ

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶಿವಾಚಾರ್ಯ ಮುರುಘಾ ಸ್ವಾಮೀಜಿ ಬಂಧನವಾಗಿದೆ. ಹಾಗೆಂದು ಮಠದ ದಿನನಿತ್ಯದ ಪೂಜೆ-ಪುನಸ್ಕಾರ, ಕೆಲಸ ಕಾರ್ಯ ವ್ಯವಹಾರಗಳು ನಿಲ್ಲುವ ಹಾಗಿಲ್ಲ. ಹೀಗಾಗಿ ಮುರುಘಾ ಮಠದ ವ್ಯಾಪ್ತಿಗೆ ಬರುವ ಹೆಬ್ಬಾಳು ಮಠದ ಮಹಾಂತ ರುದ್ರಸ್ವಾಮೀಜಿಗೆ ಮಠದ ಜವಾಬ್ದಾರಿಯನ್ನು ವಹಿಸಲಾಗಿದೆ.

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶಿವಾಚಾರ್ಯ ಮುರುಘಾ ಸ್ವಾಮೀಜಿ ಬಂಧನವಾಗಿದೆ. ಹಾಗೆಂದು ಮಠದ ದಿನನಿತ್ಯದ ಪೂಜೆ-ಪುನಸ್ಕಾರ, ಕೆಲಸ ಕಾರ್ಯ ವ್ಯವಹಾರಗಳು ನಿಲ್ಲುವ ಹಾಗಿಲ್ಲ. ಹೀಗಾಗಿ ಮುರುಘಾ ಮಠದ ವ್ಯಾಪ್ತಿಗೆ ಬರುವ ಹೆಬ್ಬಾಳು ಮಠದ ಮಹಾಂತ ರುದ್ರಸ್ವಾಮೀಜಿಗೆ ಮಠದ ಜವಾಬ್ದಾರಿಯನ್ನು ವಹಿಸಲಾಗಿದೆ.

ಮಹಾಂತ ರುದ್ರಸ್ವಾಮೀಜಿ ಅವರು ಮಠದ ಹಂಗಾಮಿ ಮುಖ್ಯಸ್ಥರಾಗಿ ಮಠದ ದೈನಂದಿನ ಚಟುವಟಿಕೆಗಳನ್ನು ನೋಡಿಕೊಳ್ಳುತ್ತಾರೆ. ಮಠದ ಶಿಕ್ಷಣ ಸಂಸ್ಥೆಗಳು, ಕಾರ್ಯಕ್ರಮಗಳು, ಸಮಾಜ ಸೇವಾ ಉಪಕ್ರಮಗಳು ಮತ್ತು ಇತರ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗುತ್ತಾರೆ.

ಮುರುಘಾ ಮಠ ಶಾಲೆಗಳು ಮತ್ತು ಕಾಲೇಜುಗಳನ್ನು ನಡೆಸುತ್ತದೆ, ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸುತ್ತದೆ. ಹೆಚ್ಚಿನ ಸಂಖ್ಯೆಯ ಆಸ್ತಿಗಳನ್ನು ಹೊಂದಿದೆ, ಅವುಗಳನ್ನು ರಕ್ಷಿಸಬೇಕಾಗಿದೆ ಎಂದು ಮಠದ ಮೂಲಗಳು ಹೇಳುತ್ತವೆ. 

ಮುರುಘಾ ಮಠದ ಶಾಖೆಯಾದ ಹೆಬ್ಬಾಳು ರುದ್ರಸ್ವಾಮಿ ಮಠದ ಉಸ್ತುವಾರಿ ವಹಿಸಿರುವ ಮಹಾಂತ ರುದ್ರಸ್ವಾಮೀಜಿ ಅವರ ಹಿರಿತನವನ್ನು ಪರಿಗಣಿಸಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಸಮಾಜ ಸೇವಕ ಅನಿತ್ ಕುಮಾರ್ ಜಿಎಸ್ ಅವರನ್ನು ಸ್ವಾಮೀಜಿಗಳ ಆಪ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel