ರಾಜ್ಯ

ರಾಮನಗರ: ಮನಕಲಕುವ ಘಟನೆ, ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾದ ತಾಯಿ

Nagaraja AB

ರಾಮನಗರ: ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷ ನೀಡಿದ ಮಹಿಳೆಯೊಬ್ಬರು ಬಳಿಕ ತಾನೂ ಕೂಡಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಸಮೀಪದ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

ಮಾಗಡಿ ತಾಲೂಕ್ ರೈತ ಸಂಘದ ಅಧ್ಯಕ್ಷ ಲೋಕೇಶ್ ಅವರ ಪತ್ನಿ ರೂಪಾ (32) ಮತ್ತು ಅವರ ಮಕ್ಕಳಾದ ಸ್ಪೂರ್ತಿ(6) ಹರ್ಷಿತಾ (4) ಮೃತಪಟ್ಟ ದುರ್ದೈವಿಗಳು. ರೂಪಾ ತನ್ನ ಜಮೀನಿನಲ್ಲಿ ಇಬ್ಬರು ಮಕ್ಕಳಾದ ಸ್ಪೂರ್ತಿ ಹಾಗೂ ಹರ್ಷಿತಾ ಅವರಿಗೆ ವಿಷ ನೀಡಿದ್ದಾರೆ. ಬಳಿಕ ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದರಿಂದಾಗಿ ಗ್ರಾಮದಲ್ಲಿ ದು:ಖ ಆವರಿಸಿದ್ದು, ಒಂದೇ ಕುಟುಂಬದ ಮೂವರ ಸಾವಿನಿಂದ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

SCROLL FOR NEXT