ಸಾಂದರ್ಭಿಕ ಚಿತ್ರ 
ರಾಜ್ಯ

ಗಣೇಶ ಮೆರವಣಿಗೆ ವೇಳೆ ಅಬ್ಬರದ ಮ್ಯೂಸಿಕ್ ಹಾಕದಂತೆ ಜೆಸ್ಕಾಂ ಸಿಬ್ಬಂದಿಗೆ ವಾರ್ನಿಂಗ್: ಪೊಲೀಸ್ ಸ್ಟೇಷನ್ ಗೆ 'ಪವರ್' ಕಟ್!

ಗಣೇಶ ಮೂರ್ತಿ ವಿಸರ್ಜನೆ ವೇಳೆ ತಡರಾತ್ರಿ ಡಿ ಜೆ. ಬಳಸಿ ನಿಯಮ ಉಲ್ಲಂಘಿಸಿದ ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಜೆಸ್ಕಾಂ ಸಿಬ್ಬಂದಿ ಹೊಸಪೇಟೆ ಪೊಲೀಸ್‌ ಠಾಣೆಯ ವಿದ್ಯುತ್‌ ಕಡಿತಗೊಳಿಸಿದ್ದರು.

ಹುಬ್ಬಳ್ಳಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ತಡರಾತ್ರಿ ಡಿ.ಜೆ. ಬಳಸಿ ನಿಯಮ ಉಲ್ಲಂಘಿಸಿದ ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಜೆಸ್ಕಾಂ ಸಿಬ್ಬಂದಿ ಹೊಸಪೇಟೆ ಪೊಲೀಸ್‌ ಠಾಣೆಯ ವಿದ್ಯುತ್‌ ಕಡಿತಗೊಳಿಸಿದ್ದರು.

ಶುಕ್ರವಾರ ತಡರಾತ್ರಿ ಜೆಸ್ಕಾಂ ಸಿಬ್ಬಂದಿ ಗಣಪನ ಮೂರ್ತಿ ವಿಸರ್ಜನೆ ವೇಳೆ ನಿಯಮ ಮೀರಿ ಡಿ.ಜೆ. ಹಾಕಿಕೊಂಡು ಕುಣಿಯುತ್ತಿದ್ದರು. ಅದನ್ನು ತಡೆದ ಪೊಲೀಸರು, ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದರು. ಇದರಿಂದ ಸಿಟ್ಟಾದ ಜೆಸ್ಕಾಂ ಸಿಬ್ಬಂದಿ ಗಂಟೆಗೂ ಹೆಚ್ಚು ಕಾಲ ಠಾಣೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರು.

ಯುಪಿಎಸ್ ಸಂಪೂರ್ಣ ಚಾರ್ಜ್ ಆಗಿದ್ದರಿಂದ ಠಾಣೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದು ಪೊಲೀಸರಿಗೆ ತಿಳಿದಿರಲಿಲ್ಲ. ಕೆಲವರು ಹೊರಗೆ ಬಂದು ನೋಡಿದಾಗ ಯಾರೋ ವಿದ್ಯುತ್ ಸಂಪರ್ಕ ತೆಗೆದಿದ್ದರು.

ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ಜೆಸ್ಕಾಂ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣೇಶ ಮೂರ್ತಿಯ ಮುಂದೆ ಜೆಸ್ಕಾಂ ಸಿಬ್ಬಂದಿಯವರು ಡಿ.ಜೆ. ಹಾಕಿಕೊಂಡು ಕುಣಿಯುತ್ತಿದ್ದರು. ಇದನ್ನು ತಡೆದು ಪ್ರಶ್ನಿಸಿದ ಪೊಲೀಸರು, ಅವರಿಗೆ ಎಚ್ಚರಿಕೆ ನೀಡಿದ್ದರು. ಇದರಿಂದ ಕೋಪಗೊಂಡ ಜೆಸ್ಕಾಂ ಸಿಬ್ಬಂದಿಗಳು ಬಡಾವಣೆ ಠಾಣೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಮುಂಜಾನೆಯವರೆಗೂ ವಿದ್ಯುತ್‌ ಇಲ್ಲದೇ ಠಾಣೆಯಲ್ಲಿದ್ದ ಸಿಬ್ಬಂದಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜೆಸ್ಕಾಂನ ಮೇಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಾಲೋಚನೆ ನಡೆಸಿ, ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲವೆಂದು ಹೇಳಿಕೆ ನೀಡಿದ ನಂತರ ಪೊಲೀಸ್‌ ಠಾಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸಚಿವ ಆನಂದ್ ಸಿಂಗ್ ಹಾಗೂ ಹಿರಿಯ ಅಧಿಕಾರಿಗಳು ಠಾಣೆಗೆ ಆಗಮಿಸಿ ಎರಡೂ ಕಡೆಯವರನ್ನು ಸಮಾಧಾನ ಪಡಿಸಬೇಕಾಯಿತು.

ವಿದ್ಯುತ್ ಕಡಿತಗೊಳಿಸಿದ್ದಕ್ಕಾಗಿ ಗೆಸ್ಕಾಂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದೇನೆ. ಎರಡೂ ಇಲಾಖೆಗಳು ಸರ್ಕಾರಕ್ಕಾಗಿ ಕೆಲಸ ಮಾಡುತ್ತವೆ ಹೀಗಾಗಿ ಇಲಾಖೆಗಳ ನಡುವೆ ಸಹಕಾರದ ಅಗತ್ಯವಿದೆ. ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT