ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗಂಡನನ್ನ ಕೊಲೆ ಮಾಡಿ ಸಹಜ ಸಾವು ಎಂದು ಕಥೆ ಕಟ್ಟಿದ್ದ ಪತ್ನಿ ಬಂಧನ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ಪೂರಿಗಾಲಿಯ ಮಹೇಶ್, ಬೆಂಗಳೂರಿನ ಕೊಕೊನಟ್ ಗಾರ್ಡನ್‌ ನಲ್ಲಿ ವಾಸವಿದ್ದರು. ಅವರನ್ನು ಸೆ. 1ರಂದು ಕೊಲೆ ಮಾಡಿದ್ದ ಶಿಲ್ಪಾ, ಅಸಹಜ ಸಾವೆಂದು ಹೇಳಿ ನಾಟಕವಾಡಿದ್ದಳು.

ಬೆಂಗಳೂರು: ಪತಿಯನ್ನು ಕೊಂದು ಮೂರ್ಛೆ ರೋಗದಿಂದ ಸಾವನ್ನಪ್ಪಿದ್ದಾನೆ ಎಂದು ಕತೆ ಕಟ್ಟಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಮಹೇಶ್, ಬೆಂಗಳೂರಿನ ಕೊಕೊನಟ್ ಗಾರ್ಡನ್‌ ನಲ್ಲಿ ವಾಸವಿದ್ದರು. ಅವರನ್ನು ಸೆ. 1ರಂದು ಕೊಲೆ ಮಾಡಿದ್ದ ಶಿಲ್ಪಾ, ಅಸಹಜ ಸಾವೆಂದು ಹೇಳಿ ನಾಟಕವಾಡಿದ್ದಳು. ಮಹೇಶ್ ಅವರ ಸಹೋದರ ನೀಡಿದ್ದ ದೂರು ಆಧರಿಸಿ, ಶಿಲ್ಪಾ ಹಾಗೂ ಕೃತ್ಯಕ್ಕೆ ಸಹಾಯ ಮಾಡಿದ್ದ ಆರೋಪಿ ಕೆಂಪದೇವಮ್ಮ ಎಂಬುವರನ್ನು ಬಂಧಿಸಲಾಗಿದೆ, ಬಾಲಾಜಿ ಎಂಬುವನು ತಲೆ ಮರೆಸಿಕೊಂಡಿದ್ದಾನೆ.

ಕೃಷಿಕ ಕುಟುಂಬದ ಮಹೇಶ್, ಶಿಲ್ಪಾ ಅವರನ್ನು ಎಂಟು ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ 6 ವರ್ಷದ ಗಂಡು ಮಗುವಿದೆ. ಶಿಲ್ಪಾ ಅವರ ತಂದೆ–ತಾಯಿ ಬೆಂಗಳೂರಿನ ಗೌಡನಪಾಳ್ಯದಲ್ಲಿ ನೆಲೆಸಿದ್ದರು. ಮಹೇಶ್‌–ಶಿಲ್ಪಾ ಸಹ ಮೂರು ತಿಂಗಳ ಹಿಂದೆ ಯಷ್ಟೇ ಬೆಂಗಳೂರಿಗೆ ಬಂದು ಕೊಕೊನಟ್ ಗಾರ್ಡನ್‌ ಪ್ರದೇಶ ದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

‘ಮದ್ಯವ್ಯಸನಿ ಆಗಿದ್ದ ಮಹೇಶ್, ನಿತ್ಯವೂ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ, ಶೀಲ ಶಂಕಿಸಿ ಪತ್ನಿ ಮೇಲೆ ಹಲ್ಲೆ ಮಾಡುತ್ತಿದ್ದ. ಇದರಿಂದ ಬೇಸತ್ತ ಶಿಲ್ಪಾ, ಪತಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ್ದಳು.

ಸೆ. 1ರಂದು ಮಹೇಶ್ ಮದ್ಯ ಕುಡಿದು ಮನೆಗೆ ಬಂದಿದ್ದರು. ಅವರಿಗೆ ಶಿಲ್ಪಾ, ಕೆಂಪದೇವಮ್ಮ ಹಾಗೂ ಇತರರು ತೀವ್ರವಾಗಿ ಹೊಡೆದಿದ್ದರು. ತೀವ್ರ ಗಾಯದಿಂದ ಮಹೇಶ್ ಮೃತಪಟ್ಟಿದ್ದ. ಮಂಡ್ಯದಲ್ಲಿರುವ ಮಹೇಶ್ ಸಂಬಂಧಿಕರಿಗೆ ಕರೆ ಮಾಡಿದ್ದ ಶಿಲ್ಪಾ, ಬೆಂಗಳೂರಿನಲ್ಲಿ ವಿಪರೀತ ಮಳೆ. ಮದ್ಯ ಕುಡಿದು ಬರುವಾಗ ಪತಿ, ನೀರಿನಲ್ಲಿ ನೆನೆದಿದ್ದಾರೆ. ಅನಾರೋಗ್ಯ ಸಮಸ್ಯೆ ಉಂಟಾಗಿ, ಮೂರ್ಛೆ ಬಂದು ಬಿದ್ದು ಮೃತಪಟ್ಟಿದ್ದಾರೆ’ ಎಂದಿದ್ದರು. ಬಳಿಕ, ಮೃತದೇಹವನ್ನು ಆಂಬುಲೆನ್ಸ್‌ನಲ್ಲಿ ಮಂಡ್ಯಕ್ಕೆ ತೆಗೆದುಕೊಂಡು ಹೋಗಿದ್ದರು.

‘ಸೆ. 1ರಂದು ರಾತ್ರಿ ಮೃತದೇಹ ಮಂಡ್ಯ ತಲುಪಿತ್ತು. ಕೊಲೆ ಬಗ್ಗೆ ಯಾರಿಗೂ ಅನುಮಾನ ಬಂದಿರಲಿಲ್ಲ. ಸೆ. 2ರಂದು ಬೆಳಿಗ್ಗೆ ಮೃತದೇಹ ಮೇಲಿನ ಬಟ್ಟೆ ಬಿಚ್ಚಿದ್ದ ಕುಟುಂಬಸ್ಥರಿಗೆ, ಕೈ–ಕಾಲು, ಸೊಂಟ ಹಾಗೂ ಇತರೆ ರಕ್ತ ಹೆಪ್ಪುಗಟ್ಟಿದ ಗಾಯದ ಗುರುತುಗಳು ಕಂಡಿದ್ದವು. ಕುಟುಂಬಸ್ಥರೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಪಿ ಶಿಲ್ಪಾ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದೆ. ಶೀಲ ಶಂಕಿಸುತ್ತಿದ್ದ ಪತಿ, ಪದೇ ಪದೇ ಜಗಳ ಮಾಡುತ್ತಿದ್ದ. ದೈಹಿಕ, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಕೊಲೆ ಮಾಡಿರುವುದಾಗಿ ಶಿಲ್ಪಾ ತಪ್ಪೊಪ್ಪಿಕೊಂಡಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT