ಹರ್ಷನ ಫೋಟೋದೊಂದಿಗೆ ಭಜರಂಗದಳ ಕಾರ್ಯಕರ್ತರ ಮೆರವಣಿಗೆ ಚಿತ್ರ 
ರಾಜ್ಯ

ಭಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಂದ ಹಂತಕರು ಹಿಂದೂ ದ್ವೇಷಿಗಳು- ಎನ್ ಐಎ

ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಹರ್ಷವನ್ನು ಕೊಲ್ಲುವಾಗ ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ.

ಬೆಂಗಳೂರು: ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗುತ್ತಾ ಹರ್ಷನನ್ನು ಕೊಂದಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ.

ರಾಜ್ಯದಲ್ಲಿ ಎದಿದ್ದ ಹಿಜಾಬ್ ವಿವಾದ ನಡುವೆ ಸಾರ್ವಜನಿಕರ ಗಮನ ಸೆಳೆಯುವ ನಿಟ್ಟಿನಲ್ಲಿ ಹರ್ಷನನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳು ಸಿಎಎ-ಎನ್ ಆರ್ ಸಿ ವಿಚಾರ, ಹಿಜಾಬ್ ವಿವಾದ ಮತ್ತು ಭಜರಂಗದಳ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ ಚಟುವಟಿಕೆಗಳಿಂದ ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಹೇಳಲಾಗಿದೆ.

ಇದೇ ಕಾರಣಗಳಿಂದ ಆರೋಪಿಗಳು ಹಿಂದೂ ಸಮುದಾಯದಲ್ಲಿ ಭೀತಿಯನ್ನು ಸೃಷ್ಟಿಸಲು ಮತ್ತು ಶಿವಮೊಗ್ಗ ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರ ನಡುವೆ ಕೋಮು ಸೌಹಾರ್ದತೆ ಹದಗಡೆಸಿ  ದ್ವೇಷವನ್ನು ಸೃಷ್ಟಿಸಲು ಸಂಚು ರೂಪಿಸಿದ್ದಾರೆ ಎಂದು ಅದು ಹೇಳಿದೆ.

ಆರೋಪಿಗಳು ಶಿವಮೊಗ್ಗದ ಪ್ರಮುಖ ಹಿಂದೂ ಸಮುದಾಯದ ಮುಖಂಡರ ಮೆರವಣಿಗೆಗಳು, ಆಚರಣೆಗಳು ಮತ್ತು ಸಮುದಾಯದ ಕಾರ್ಯಕ್ರಮಗಳ ಚಲನವಲನವನ್ನು ಗಮನಿಸುತ್ತಿದ್ದರು. ನಂತರ ಹರ್ಷವನ್ನು ಪ್ರಮುಖ ಹಿಂದೂ ಸಮುದಾಯದ ಮುಖಂಡ ಎಂದು ತಿಳಿದು ಹತ್ಯೆ ಮಾಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT