ಹರ್ಷನ ಫೋಟೋದೊಂದಿಗೆ ಭಜರಂಗದಳ ಕಾರ್ಯಕರ್ತರ ಮೆರವಣಿಗೆ ಚಿತ್ರ 
ರಾಜ್ಯ

ಭಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಂದ ಹಂತಕರು ಹಿಂದೂ ದ್ವೇಷಿಗಳು- ಎನ್ ಐಎ

ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಹರ್ಷವನ್ನು ಕೊಲ್ಲುವಾಗ ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ.

ಬೆಂಗಳೂರು: ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗುತ್ತಾ ಹರ್ಷನನ್ನು ಕೊಂದಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ.

ರಾಜ್ಯದಲ್ಲಿ ಎದಿದ್ದ ಹಿಜಾಬ್ ವಿವಾದ ನಡುವೆ ಸಾರ್ವಜನಿಕರ ಗಮನ ಸೆಳೆಯುವ ನಿಟ್ಟಿನಲ್ಲಿ ಹರ್ಷನನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳು ಸಿಎಎ-ಎನ್ ಆರ್ ಸಿ ವಿಚಾರ, ಹಿಜಾಬ್ ವಿವಾದ ಮತ್ತು ಭಜರಂಗದಳ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ ಚಟುವಟಿಕೆಗಳಿಂದ ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಚಾರ್ಜ್ ಶೀಟ್ ನಲ್ಲಿ ಹೇಳಲಾಗಿದೆ.

ಇದೇ ಕಾರಣಗಳಿಂದ ಆರೋಪಿಗಳು ಹಿಂದೂ ಸಮುದಾಯದಲ್ಲಿ ಭೀತಿಯನ್ನು ಸೃಷ್ಟಿಸಲು ಮತ್ತು ಶಿವಮೊಗ್ಗ ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರ ನಡುವೆ ಕೋಮು ಸೌಹಾರ್ದತೆ ಹದಗಡೆಸಿ  ದ್ವೇಷವನ್ನು ಸೃಷ್ಟಿಸಲು ಸಂಚು ರೂಪಿಸಿದ್ದಾರೆ ಎಂದು ಅದು ಹೇಳಿದೆ.

ಆರೋಪಿಗಳು ಶಿವಮೊಗ್ಗದ ಪ್ರಮುಖ ಹಿಂದೂ ಸಮುದಾಯದ ಮುಖಂಡರ ಮೆರವಣಿಗೆಗಳು, ಆಚರಣೆಗಳು ಮತ್ತು ಸಮುದಾಯದ ಕಾರ್ಯಕ್ರಮಗಳ ಚಲನವಲನವನ್ನು ಗಮನಿಸುತ್ತಿದ್ದರು. ನಂತರ ಹರ್ಷವನ್ನು ಪ್ರಮುಖ ಹಿಂದೂ ಸಮುದಾಯದ ಮುಖಂಡ ಎಂದು ತಿಳಿದು ಹತ್ಯೆ ಮಾಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT