ಪ್ರಾತಿನಿಧಿಕ ಚಿತ್ರ 
ರಾಜ್ಯ

ಕೊಪ್ಪಳ: ದಶಕಗಳಷ್ಟು ಹಳೆಯ ಸರ್ಕಾರಿ ಶಾಲೆಗಳಿಗೆ ಸ್ವಂತ ಖರ್ಚಿನಲ್ಲೇ ಬಣ್ಣ ಬಳಿಸಲು ಶಿಕ್ಷಕರು ಮುಂದು!

ಕೊಪ್ಪಳ ತಾಲೂಕಿನಲ್ಲಿ ದಶಕಗಳಷ್ಟು ಹಳೆಯದಾದ ಸರ್ಕಾರಿ ಶಾಲೆಗಳ ಸ್ಥಿತಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಸುಧಾರಿಸಲು 10 ಸದಸ್ಯರ ಸರ್ಕಾರಿ ಶಾಲಾ ಶಿಕ್ಷಕರ ಗುಂಪು ಮುಂದಾಗಿದೆ.

ಕೊಪ್ಪಳ: ಕೊಪ್ಪಳ ತಾಲೂಕಿನಲ್ಲಿ ದಶಕಗಳಷ್ಟು ಹಳೆಯದಾದ ಸರ್ಕಾರಿ ಶಾಲೆಗಳ ಸ್ಥಿತಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಸುಧಾರಿಸಲು 10 ಸದಸ್ಯರ ಸರ್ಕಾರಿ ಶಾಲಾ ಶಿಕ್ಷಕರ ಗುಂಪು ಮುಂದಾಗಿದೆ.

ಕಳೆದ ವರ್ಷ ಶಿಕ್ಷಕರ ದಿನದಂದು ಈ ಸಮಾನ ಮನಸ್ಕ ಶಿಕ್ಷಕರ ನಡುವಿನ ಸಾಮಾನ್ಯ ಸಂಭಾಷಣೆಯಿಂದಾಗಿ ನಿರ್ಲಕ್ಷ್ಯಕ್ಕೆ ಒಳಗಾದ ಸರ್ಕಾರಿ ಶಾಲೆಗಳಿಗೆ ಬಣ್ಣ ಬಳಿಯಲು ಸ್ವಯಂಪ್ರೇರಣೆಯಿಂದ ತಂಡವೊಂದನ್ನು ರಚಿಸಿಕೊಂಡಿದೆ. ಇದು ಶಾಲಾ ಕಟ್ಟಡಗಳಿಗೆ ಬಣ್ಣ ಬಳಿಯುವ ವೆಚ್ಚವನ್ನು ಭರಿಸಲು ನಿರ್ಧರಿಸಿದ್ದು, ಕೊಪ್ಪಳದ ಬಿಇಒ ಕಚೇರಿ ಸೇರಿದಂತೆ ಈವರೆಗೆ 14 ಕಡೆ ಬಣ್ಣ ಬಳಿಯಲಾಗಿದೆ.

ಪ್ರತಿ ಶಾಲೆಗೆ ಬಣ್ಣ ಬಳಿಯಲು ಸುಮಾರು 40 ಸಾವಿರ ರೂಪಾಯಿ ವೆಚ್ಚ ತಗಲುತ್ತಿದ್ದು, ಶಿಕ್ಷಕರು ಸ್ವಯಂ ಪ್ರೇರಿತರಾಗಿ ಹಣ ಪಾವತಿಸುತ್ತಿದ್ದಾರೆ ಎಂದು ಸಮೂಹದ ಸದಸ್ಯ ಹಾಗೂ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಹನುಮಂತಪ್ಪ ಕುರಿ ಹೇಳಿದ್ದಾರೆ.

'ನಾವು ಸರ್ಕಾರಿ ಶಾಲೆಯ ಕಟ್ಟಡವನ್ನು ಆಯ್ಕೆ ಮಾಡುತ್ತೇವೆ ಮತ್ತು ಭಾನುವಾರದಂದು ಅದರ ಪೇಂಟಿಂಗ್ ಕೆಲಸವನ್ನು ಕೈಗೊಳ್ಳುತ್ತೇವೆ. ಬೆಳಿಗ್ಗೆ 6 ಗಂಟೆಗೆ ನಮ್ಮ ಕೆಲಸವನ್ನು ಪ್ರಾರಂಭಿಸುತ್ತೇವೆ ಮತ್ತು ಸಂಜೆಯ ವೇಳೆಗೆ ನಾವು ಎಲ್ಲಾ 10 ಸದಸ್ಯರು ಸೇರಿಕೊಂಡು ಕೆಲಸವನ್ನು ಪೂರ್ಣಗೊಳಿಸುತ್ತೇವೆ ಎಂದು ಮತ್ತೋರ್ವ ಶಿಕ್ಷಕ ಬೀರಪ್ಪ ಅಂಡಗಿ ಹೇಳಿದರು.

ತಂಡದಲ್ಲಿ ಇತರ ಶಿಕ್ಷಕರಾದ ಕಾಶಿನಾಥ ಸಿರಿಗೇರಿ, ಶರಣಪ್ಪ, ಚಂದ್ರು, ಸುರೇಶ ಕಂಬಳಿ, ಹುಲುಗಪ್ಪ ಭಜಂತ್ರಿ, ವೀರೇಶ, ಗುರುಸ್ವಾಮಿ, ಮಲ್ಲಪ್ಪ ಗುಡದಣ್ಣನವರ್ ಇದ್ದಾರೆ.

ಇದುವರೆಗೆ ಕೊಪ್ಪಳ ತಾಲೂಕಿನ ಲಾಕಳ್ಗಡ ಅಳವಂಡಿ, ಹಿತ್ನಾಳ್, ಹೊಸಳ್ಳಿ, ಕಾವಲಿ, ಚಿಲಖಮುಖಿ, ಮಂಗಳಾಪುರ, ಕೂಟಗಾನಹಳ್ಳಿ, ಚಾಮಲಾಪುರ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಶಾಲೆಗಳು, ಕುವೆಂಪು ನಗರದ ಸರ್ಕಾರಿ ಶಾಲೆ ಜತೆಗೆ ಮೇಲೆ ತಿಳಿಸಿದ ಬಿಇಒ ಕಚೇರಿಗೆ ಬಣ್ಣ ಬಳಿದಿದ್ದಾರೆ.

ಕೊಪ್ಪಳ ಬಿಇಒ ಉಮೇಶ ಪೂಜಾರ್ ಮಾತನಾಡಿ, ತಂಡಕ್ಕೆ ತಮ್ಮ ಉದಾತ್ತ ಕಾರ್ಯವನ್ನು ಮುಂದುವರಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT