ಸಿಎಂ ಬೊಮ್ಮಾಯಿ 
ರಾಜ್ಯ

ಮಳೆ ಬಂದಾಗ ಬೆಂಗಳೂರು ಜಲಾವೃತವಾಗುವುದಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣ: ಸಿಎಂ ಬೊಮ್ಮಾಯಿ

ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಒಂದು ದಿನ ವ್ಯಾಪಕವಾಗಿ ಮಳೆ ಬಿದ್ದಾಗ ಬಹುತೇಕ ಕಡೆಗಳಲ್ಲಿ ನೀರು ತುಂಬಿಕೊಂಡು, ತಗ್ಗು ಪ್ರದೇಶಗಳು ಜಲಾವೃತವಾಗಿ ಹಾನಿ ಉಂಟಾಗುತ್ತದೆ. ಹಲವೆಡೆ ಅನಾಹುತವಾಗುತ್ತವೆ. ಈ ಬಾರಿಯ ಮಳೆಗೆ ಬೆಂಗಳೂರಿನಲ್ಲಿ ಸಾಕಷ್ಟು ತೊಂದರೆಯಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಒಂದು ದಿನ ವ್ಯಾಪಕವಾಗಿ ಮಳೆ ಬಿದ್ದಾಗ (Bengaluru rain) ಬಹುತೇಕ ಕಡೆಗಳಲ್ಲಿ ನೀರು ತುಂಬಿಕೊಂಡು, ತಗ್ಗು ಪ್ರದೇಶಗಳು ಜಲಾವೃತವಾಗಿ ಹಾನಿ ಉಂಟಾಗುತ್ತದೆ. ಹಲವೆಡೆ ಅನಾಹುತವಾಗುತ್ತವೆ. ಈ ಬಾರಿಯ ಮಳೆಗೆ ಬೆಂಗಳೂರಿನಲ್ಲಿ ಸಾಕಷ್ಟು ತೊಂದರೆಯಾಗಿದೆ.

ಇದಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನಾರಹಿತ ಆಡಳಿತ ಮತ್ತು ದುರಾಡಳಿತವೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಜನವಸತಿಗೆ, ಕಟ್ಟಡ ನಿರ್ಮಾಣಕ್ಕೆ ಕೆರೆ ಮತ್ತು ಬಫರ್ ವಲಯಗಳಲ್ಲಿ ಎಲ್ಲೆಂದರಲ್ಲಿ ಅನುಮತಿ ಕೊಟ್ಟಿರುವುದೇ ಇಂದು ನೀರು ನಿಲ್ಲಲು ದುಸ್ಥಿತಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಬೆಂಗಳೂರು ಮಳೆಯ ಸಮಸ್ಯೆಯನ್ನು ಸವಾಲಾಗಿ ತೆಗೆದುಕೊಂಡಿದ್ದೇವೆ. ನಮ್ಮ ಅಧಿಕಾರಿಗಳು, ಎಂಜಿನಿಯರ್‌ಗಳು, ಕಾರ್ಮಿಕರು ಮತ್ತು ಎಸ್‌ಡಿಆರ್‌ಎಫ್ ತಂಡ 24/7 ಕೆಲಸ ಮಾಡುತ್ತಿದೆ. ಸಾಕಷ್ಟು ಒತ್ತುವರಿ ತೆರವು ಮಾಡಿದ್ದು, ಇನ್ನಷ್ಟು ತೆರವಿಗೆ ಮುಂದಾಗಿದ್ದೇವೆ. ಎರಡನೆಯದಾಗಿ, ನಾವು ಟ್ಯಾಂಕ್‌ಗಳಿಗೆ ಸ್ಲೂಸ್ ಗೇಟ್‌ಗಳನ್ನು ಹಾಕುತ್ತಿದ್ದೇವೆ. ಬೆಂಗಳೂರಿನಲ್ಲಿ ನೀರು ಹರಿಸಲು 1500 ಕೋಟಿ ನೀಡಿದ್ದು, ಅತಿಕ್ರಮಣ ತೆರವಿಗೆ 300 ಕೋಟಿ ನೀಡಲಾಗಿದೆ.

ಬೆಂಗಳೂರಿನ ಚರಂಡಿ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ 1500 ಕೋಟಿ ರೂಪಾಯಿ, ಕೆರೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸಲು 300 ಕೋಟಿ ರೂಪಾಯಿಗಳನ್ನು ನೀಡಿದೆ. ಭವಿಷ್ಯದಲ್ಲಿ ಈ ರೀತಿ ನೀರು ನಿಂತು ಸಮಸ್ಯೆಯಾಗದೆ ಸರಾಗವಾಗಿ ಹರಿದು ಹೋಗುತ್ತದೆ, ಜನರು ತಾಳ್ಮೆಯಿಂದ ನಮ್ಮ ಜೊತೆ ಸಹಕರಿಸಬೇಕು ಎಂದು ಕೇಳಿಕೊಂಡರು. 

ಈ ಮಳೆಯಿಂದ ಇಡೀ ಬೆಂಗಳೂರಿಗೆ ಸಮಸ್ಯೆಯಾಗಿಲ್ಲ. 2 ವಲಯಗಳು, ಮುಖ್ಯವಾಗಿ ಮಹದೇವಪುರದಲ್ಲಿ ಸಮಸ್ಯೆಯಾಗಿದೆ. ಆ ಸಣ್ಣ ಪ್ರದೇಶದಲ್ಲಿ 69 ಟ್ಯಾಂಕ್ ಗಳಿವೆ. ಎಲ್ಲವೂ ತುಂಬಿ ಹರಿಯುತ್ತಿವೆ. ಕಟ್ಟಡ, ಮನೆಗಳು ತಗ್ಗು ಪ್ರದೇಶದಲ್ಲಿವೆ. ಮೂರನೆಯದಾಗಿ ಇಲ್ಲಿ ಅತಿಕ್ರಮಣವಾಗಿದೆ ಹೀಗಾಗಿ ಸಮಸ್ಯೆಯುಂಟಾಗಿದೆ ಎಂದು ಸಿಎಂ ಕಾರಣ ನೀಡಿದರು. 

ಮಂಡ್ಯ ಜಿಲ್ಲೆಯ 2 ನೀರು ಪೂರೈಕೆ ಕೇಂದ್ರಗಳಿಗೆ ಮಳೆ ನೀರು ನುಗ್ಗಿದೆ. 1ನೇ ಪಂಪ್‌ಹೌಸ್‌ನಿಂದ ನೀರು ತಗ್ಗಿದ್ದು ಪೂರೈಕೆ ಆರಂಭವಾಗಲಿದೆ. ಇಂದು ಮಧ್ಯಾಹ್ನದೊಳಗೆ ಇತರೆ ಪಂಪ್‌ಹೌಸ್‌ ತೆರವುಗೊಳಿಸಲಾಗುವುದು. ಟ್ಯಾಂಕರ್ ಮತ್ತು ಬೋರ್‌ವೆಲ್ ಮೂಲಕ ನೀರು ಒದಗಿಸಲಾಗುವುದು ಎಂದು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಕುರಿತು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT