ಸಚಿವ ಉಮೇಶ್ ಕತ್ತಿ-ಗೃಹ ಸಚಿವ ಆರಗ ಜ್ಞಾನೇಂದ್ರ(ಸಂಗ್ರಹ ಚಿತ್ರ) 
ರಾಜ್ಯ

ನೇರವಾಗಿ ಮಾತನಾಡುವ ಹಾಸ್ಯ ಪ್ರಜ್ಞೆಯುಳ್ಳ ವ್ಯಕ್ತಿಯಾಗಿದ್ದರು ಉಮೇಶ್ ಕತ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದ ನೇರ-ನಿಷ್ಠುರ ವ್ಯಕ್ತಿಯಾಗಿದ್ದರು ಎಂದು ಗೃಹ ಸಚಿವ ಆರಗ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ತುಮಕೂರು: ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದ ನೇರ-ನಿಷ್ಠುರ ವ್ಯಕ್ತಿಯಾಗಿದ್ದರು ಎಂದು ಗೃಹ ಸಚಿವ ಆರಗ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ ನಿಧನ ಅತ್ಯಂತ ದುಖವಾಗಿದೆ. ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಅನಾರೋಗ್ಯದ ಕಾರಣ ಕಳೆದ ಸಚಿವ ಸಂಪುಟ ಸಭೆಗೆ ಹಾಜರಾಗಿರಲಿಲ್ಲ ಎಂದರು. ಕತ್ತಿಯವರು ಹಾಸ್ಯ ಪ್ರಜ್ಞೆ ಉಳ್ಳವರಾಗಿದ್ದರು. ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು. ಅವರ ಕುಟುಂಬಕ್ಕೆ ದುಖ ಭರಿಸುವ ಶಕ್ತಿ ಕೊಡಲಿ. ಅವರ ನಿಧನದಿಂದ ನನ್ನ ಎಲ್ಲಾ ಕೆಲಸ ಕಾರ್ಯ ರದ್ದು ಮಾಡಿದ್ದೇನೆ. ಜನೋತ್ಸವದ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ನಿರ್ಧರಿಸುತ್ತಾರೆ ಎಂದರು. 

ಈಗ ನಾನು ಬೆಂಗಳೂರಿಗೆ ಹೋಗುತ್ತಿದ್ದೇನೆ. ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಶೇಕಡಾ 300ರಿಂದ 400ರಷ್ಟು ಹೆಚ್ಚಾಗಿದೆ. 3 ಸಾವಿರ ಎಕರೆಯಷ್ಟು ಬೆಳೆಹಾನಿಯಾಗಿದೆ. ಇಲ್ಲಿಯವರೆಗೆ ಸುಮಾರು 10 ಜನ ಮೃತಪಟ್ಟಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!