ಪ್ರಾತಿನಿಧಿಕ ಚಿತ್ರ 
ರಾಜ್ಯ

ಪ್ರವಾಹ ಪೀಡಿತ ಬೆಂಗಳೂರಿನಲ್ಲಿ ಹೋಟೆಲ್ ರೂಂ ದರಗಳು ದ್ವಿಗುಣ; ಒಂದು ರಾತ್ರಿಗೆ 40 ಸಾವಿರ ರೂ., ಸಂತ್ರಸ್ತರ ಪರದಾಟ

ಪ್ರವಾಹದಿಂದಾಗಿ ಸ್ಥಳಾಂತರಗೊಂಡ ಮತ್ತು ಹತಾಶ ಕುಟುಂಬಗಳು ಈಗ ಸಾಮಾನ್ಯ ಶ್ರೇಣಿಯ 10,000-20 ಸಾವಿರ ರೂಪಾಯಿಯ ರೂಂಗಳಿಗೆ ಸರಾಸರಿ 30,000-40,000 ರೂಪಾಯಿ ನೀಡಬೇಕಾಗಿದ್ದು, ಪರದಾಡುವಂತಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಮನೆಗಳಿಗೆ ನೀರು ನುಗ್ಗಿವೆ. ಇದೇ ಹಿನ್ನೆಲೆಯಲ್ಲಿ ಹೋಟೆಲ್ ದರಗಳು ಕೂಡ ಗಗನಕ್ಕೇರಿವೆ. ಪ್ರವಾಹದಿಂದಾಗಿ ಸ್ಥಳಾಂತರಗೊಂಡ ಮತ್ತು ಹತಾಶ ಕುಟುಂಬಗಳು ಈಗ ಸಾಮಾನ್ಯ ಶ್ರೇಣಿಯ 10,000-20 ಸಾವಿರ ರೂಪಾಯಿಯ ರೂಂಗಳಿಗೆ ಸರಾಸರಿ 30,000-40,000 ರೂಪಾಯಿ ನೀಡಬೇಕಾಗಿದ್ದು, ಪರದಾಡುವಂತಾಗಿದೆ.

ಪರ್ಪಲ್‌ಫ್ರಂಟ್ ಟೆಕ್ನಾಲಜೀಸ್‌ನ ಸಿಇಒ ಮತ್ತು ಸಂಸ್ಥಾಪಕಿ ಮೀನಾ ಗಿರಿಸಬಲ್ಲಾ ಮಾತನಾಡಿ, ಯೆಮಲೂರಿನಲ್ಲಿನ ತಮ್ಮ ಐಷಾರಾಮಿ ಗೇಟೆಡ್ ಸಮುದಾಯವು ಜಲಾವೃತಗೊಂಡ ನಂತರ ಓಲ್ಡ್ ಏರ್‌ಪೋರ್ಟ್ ರಸ್ತೆಯ ಹೋಟೆಲ್‌ನಲ್ಲಿ ರಾತ್ರಿ ಕಳೆಯಲು ಅವರ ನಾಲ್ಕು ಜನರ ಕುಟುಂಬವು 42,000 ರೂಪಾಯಿ ನೀಡಿದೆ ಎಂದಿದ್ದಾರೆ.

'ಹೋಟೆಲ್‌ಗಳಲ್ಲಿನ ಬೆಲೆ ಆಕಾಶದೆತ್ತರಕ್ಕೆ ಏರಿಕೆಯಾಗುತ್ತಿದ್ದರೂ ಕೂಡ ಜನರಿಗೆ ರೂಂಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. 'ಆರಂಭದಲ್ಲಿ, ಪ್ರವಾಹದ ನೀರು ಕಡಿಮೆಯಾಗುವವರೆಗೂ ನಾವು ನಮ್ಮ ವಿಲ್ಲಾದ ಮೊದಲ ಮಹಡಿಯಲ್ಲಿ ಇರಬಹುದೆಂದು ನಾವು ಭಾವಿಸಿದ್ದೆವು. ಆದರೆ, ವಿದ್ಯುತ್ ಬ್ಯಾಕ್‌ಅಪ್ ಖಾಲಿಯಾಯಿತು. ಹೀಗಾಗಿ, ಬೆಲೆ ಎಷ್ಟೇ ಇದ್ದರೂ ಹೋಟೆಲ್ ಕೋಣೆಯೇ ನಮಗೆ ಲಭ್ಯವಿರುವ ಏಕೈಕ ಆಯ್ಕೆಯಾಗಿದೆ. ಹೀಗಾಗಿ ಹೋಟೆಲ್‌ಗಳು ಹೆಚ್ಚಿನ ದರ ವಿಧಿಸುತ್ತಿರುವುದರಲ್ಲಿ ಆಶ್ಚರ್ಯವಿಲ್ಲ' ಎನ್ನುತ್ತಾರೆ ಮತ್ತೋರ್ವ ನಿವಾಸಿ.

ಅನೇಕ ಹೋಟೆಲ್‌ಗಳು ಸಾಕುಪ್ರಾಣಿಗಳೊಂದಿಗೆ ಅತಿಥಿಗಳನ್ನು ಒಳಸೇರಿಸಲು ನಿರಾಕರಿಸುತ್ತಿರುವುದರಿಂದ ರೂಂಗಳಿಗೆ ಬೇಡಿಕೆ ಮತ್ತು ಬೆಲೆ ಏರಿಕೆಯಾಗಲು ಪ್ರಮುಖ ಕಾರಣವಾಗಿದೆ.

ಆತಿಥ್ಯ ವಲಯದ ಮೂಲಗಳು ಹೇಳುವಂತೆ, ಸ್ಟಾರ್ ಹೋಟೆಲ್‌ಗಳಲ್ಲಿನ ಕೊಠಡಿಗಳು 10-15 ದಿನಗಳವರೆಗೆ ಕಾಯ್ದಿರಿಸಲ್ಪಟ್ಟಿವೆ. ಏಕೆಂದರೆ ಅತಿಥಿಗಳು ತಮ್ಮ ಐಷಾರಾಮಿ ಮನೆಗಳನ್ನು ಸ್ವಚ್ಛಗೊಳಿಸಲು ಮತ್ತು ನವೀಕರಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ' ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT