ಡಾ.ಶಿವಮೂರ್ತಿ ಸ್ವಾಮೀಜಿ 
ರಾಜ್ಯ

ಮುರುಘಾ ಮಠದ ಶಿವಮೂರ್ತಿ ಶ್ರಿಗಳಿಗೆ ಆಂಜಿಯೋಪ್ಲಾಸ್ಟಿ: ವರದಿ ಕೇಳಿದ ನ್ಯಾಯಾಧೀಶರು!

ಶ್ರೀಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ರೋಗಿಯ ಪ್ರಾಥಮಿಕ ತಪಾಸಣೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿ, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ತೀರ್ಮಾನ ಕೈಗೊಳ್ಳಬಹುದು ಎಂದು ಸಲಹೆ ನೀಡಿದರು.

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೃದಯ ಚಿಕಿತ್ಸೆ ಅಗತ್ಯವಿದೆ ಎಂಬ ಅರ್ಜಿಗೆ ಸ್ಪಂದಿಸಿರುವ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಶ್ರೀಗಳನ್ನು ಅತ್ಯುತ್ತಮ ಆಸ್ಪತ್ರೆಗೆ ಸ್ಥಳಾಂತರಿಸುವ ಮುನ್ನ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉತ್ತಮ ಚಿಕಿತ್ಸೆ ಕುರಿತು ವರದಿ ಪಡೆಯುವಂತೆ ಜೈಲು ಅಧೀಕ್ಷಕರಿಗೆ ಬುಧವಾರ ಸೂಚಿಸಿದರು.

ಶ್ರೀಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ರೋಗಿಯ ಪ್ರಾಥಮಿಕ ತಪಾಸಣೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿ, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ತೀರ್ಮಾನ ಕೈಗೊಳ್ಳಬಹುದು ಎಂದು ಸಲಹೆ ನೀಡಿದರು.

ಶ್ರೀಗಳ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ, ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಸಂತ್ರಸ್ತರಿಗೆ ಮತ್ತು ವಿಶೇಷ ಸರ್ಕಾರಿ ಅಭಿಯೋಜಕಿ ನಾಗವೇಣಿ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಖಾಸಗಿ ವಕೀಲ ಶ್ರೀನಿವಾಸ್ ವಿಶೇಷ ಸರ್ಕಾರಿ ಅಭಿಯೋಜಕರನ್ನು ಬೆಂಬಲಿಸಲು ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT