ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ ಚಿತ್ರ 
ರಾಜ್ಯ

ಮಳೆಹಾನಿ: ಕಲಬುರಗಿ, ಹುಬ್ಬಳ್ಳಿಯಲ್ಲಿ ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ

ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ,  ಪರಿಶೀಲನೆ ನಡೆಸಿತು.

ಕಲಬುರಗಿ: ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ನಿರ್ದೇಶಕ ಡಿ.ಕೆ. ಮನೋಹರನ್ ನೇತೃತ್ವದಲ್ಲಿನ ಕೇಂದ್ರ ಅಧ್ಯಯನ ತಂಡ, ಆಗಸ್ಟ್ ತಿಂಗಳಲ್ಲಿ ಕಲಬುರಗಿಯ ಜಿಲ್ಲೆಯಲ್ಲಿ ಮಳೆಯಿಂದಾದ ಬೆಳೆ ಹಾಗೂ ಮನೆ ಹಾನಿ ಕುರಿತು ಪರಿಶೀಲನೆ ನಡೆಸಿತು.

ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದ ತಂಡ  ಆಗಸ್ಟ್ 2 ರಿಂದ 9 ರ ನಡುವೆ ಭಾರೀ ಮಳೆಯಿಂದ ಹಾನಿ ಕುರಿತು ರೈತರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆಯಿತು. ಪ್ರವಾಹದಿಂದಾಗಿ ಸುಮಾರು 11, 000 ಟ್ರ್ಯಾಕ್ಟರ್‌ಗಳು ಮತ್ತು 8, 500 ಮನೆಗಳು ಹಾನಿಗೊಳಗಾಗಿವೆ. ಕೇಂದ್ರ ತಂಡ ಈ ವಲಯದಲ್ಲಿ ಉಂಟಾದ ಹಾನಿಯ ಪ್ರಮಾಣವನ್ನು ಸಹ ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್ ತಿಳಿಸಿದರು.

ಮತ್ತೊಂದು ತಂಡ ಹುಬ್ಬಳ್ಳಿಯ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇನ್ನೂ 10 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ಹಾನಿ ಕುರಿತ ವರದಿ ಸಲ್ಲಿಸುವುದಾಗಿ ಕೇಂದ್ರ ತಂಡ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT