ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ ಚಿತ್ರ 
ರಾಜ್ಯ

ಮಳೆಹಾನಿ: ಕಲಬುರಗಿ, ಹುಬ್ಬಳ್ಳಿಯಲ್ಲಿ ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ

ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ,  ಪರಿಶೀಲನೆ ನಡೆಸಿತು.

ಕಲಬುರಗಿ: ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ನಿರ್ದೇಶಕ ಡಿ.ಕೆ. ಮನೋಹರನ್ ನೇತೃತ್ವದಲ್ಲಿನ ಕೇಂದ್ರ ಅಧ್ಯಯನ ತಂಡ, ಆಗಸ್ಟ್ ತಿಂಗಳಲ್ಲಿ ಕಲಬುರಗಿಯ ಜಿಲ್ಲೆಯಲ್ಲಿ ಮಳೆಯಿಂದಾದ ಬೆಳೆ ಹಾಗೂ ಮನೆ ಹಾನಿ ಕುರಿತು ಪರಿಶೀಲನೆ ನಡೆಸಿತು.

ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದ ತಂಡ  ಆಗಸ್ಟ್ 2 ರಿಂದ 9 ರ ನಡುವೆ ಭಾರೀ ಮಳೆಯಿಂದ ಹಾನಿ ಕುರಿತು ರೈತರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆಯಿತು. ಪ್ರವಾಹದಿಂದಾಗಿ ಸುಮಾರು 11, 000 ಟ್ರ್ಯಾಕ್ಟರ್‌ಗಳು ಮತ್ತು 8, 500 ಮನೆಗಳು ಹಾನಿಗೊಳಗಾಗಿವೆ. ಕೇಂದ್ರ ತಂಡ ಈ ವಲಯದಲ್ಲಿ ಉಂಟಾದ ಹಾನಿಯ ಪ್ರಮಾಣವನ್ನು ಸಹ ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್ ತಿಳಿಸಿದರು.

ಮತ್ತೊಂದು ತಂಡ ಹುಬ್ಬಳ್ಳಿಯ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇನ್ನೂ 10 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ಹಾನಿ ಕುರಿತ ವರದಿ ಸಲ್ಲಿಸುವುದಾಗಿ ಕೇಂದ್ರ ತಂಡ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?

ಕೊಲಂಬಿಯಾ ಸೇನಾ ವಿಮಾನ ಪತನ: ಕನಿಷ್ಠ 66 ಮಂದಿ ಸಾವು, ನೂರಾರು ಮಂದಿಗೆ ಗಾಯ-Video

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ

2028ಕ್ಕೆ ರಾಜ್ಯದಲ್ಲಿ ಹಿಂದೂ ಸರ್ಕಾರ: ಪೊಲೀಸರ ಕೈಗೆ AK-47 ಕೊಟ್ಟು, ಪಾಕಿಸ್ತಾನ್ ಜಿಂದಾಬಾದ್ ಅಂದವರ ಬಾಯಿಗೆ ಗುಂಡಿಟ್ಟು ಹೊಡೆಸ್ತೀವಿ; ಯತ್ನಾಳ್

SCROLL FOR NEXT