KPTCL ನೇಮಕಾತಿ ಅಕ್ರಮ 
ರಾಜ್ಯ

KPTCL ನೇಮಕಾತಿ ಅಕ್ರಮ: ಮತ್ತೋರ್ವನ ಬಂಧನ, ಬಂಧಿತರ ಸಂಖ್ಯೆ 17ಕ್ಕೇರಿಕೆ

KPTCL ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಈ ವರೆಗಿನ ಬಂಧಿತರ ಸಂಖ್ಯೆ 17ಕ್ಕೇರಿಕೆಯಾಗಿದೆ.

ಬೆಳಗಾವಿ: KPTCL ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಈ ವರೆಗಿನ ಬಂಧಿತರ ಸಂಖ್ಯೆ 17ಕ್ಕೇರಿಕೆಯಾಗಿದೆ.

ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮ ನಡೆದ ಪ್ರಕರಣ ಸಂಬಂಧ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಪ್ರಮುಖ ಆರೋಪಿಯ ಬಂಧನವಾಗಿದೆ. ಬೆಂಗಳೂರಿನ ದೇವಸಂದ್ರದ ಮೊಹಮ್ಮದ್ ಅಜೀಮುದ್ದಿನ್ ಬಂಧಿತ ಆರೋಪಿ. ಈತನ ಬಂಧನದಿಂದ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮದಲ್ಲಿ ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ಕಿಂಗ್‌ಪಿನ್ ಸಂಜು ಭಂಡಾರಿ ಹಾಗೂ ಬೆಳಗಾವಿಯ ಇತರರಿಗೆ ಆರೋಪಿ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಎನ್ನಲಾಗಿದೆ. 

ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಏಳು ಎನ್-95 ಮಾಸ್ಕ್, 41 ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಬನಿಯನ್, 445 ಎಲೆಕ್ಟ್ರಾನಿಕ್ ಇಯರ್ ಪೀಸ್, 554 ವಿವಿಧ ಬಗೆಯ ಚಾರ್ಜಿಂಗ್ ಕೇಬಲ್, 6 ವಾಕಿಟಾಕಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರ-ರಾಜ್ಯ ಸರ್ಕಾರಗಳಿಂದ ಈವರೆಗೆ ನಡೆದ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷೆಗಳಲ್ಲಿ ಅಕ್ರಮ ಎಸಗಲು ಎಲೆಕ್ಟ್ರಾನಿಕ್ ಉಪಕರಣಗಳ ಪೂರೈಕೆ ಆರೋಪ ಮಾಡಿದ್ದು, ಬೆಂಗಳೂರಿನ ಎಸ್ ಪಿ ರಸ್ತೆಯಲ್ಲಿ ಸ್ಪೈ ಜೋನ್ ಎಲೆಕ್ಟ್ರಾನಿಕ್ ಮಳಿಗೆಯನ್ನು ಆರೋಪಿ ಹೊಂದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಮಳಿಗೆ ಸೀಜ್ ಮಾಡಿ ಆರೋಪಿಯನ್ನು ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ. ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದು, ಆರೋಪಿಗಳನ್ನು ಜಾಲಾಡಲು ಹೋದ ಪೊಲೀಸರ ಖೆಡ್ಡಾಕ್ಕೆ ಮುಖ್ಯ ಆರೋಪಿ ಬಿದಿದ್ದಾನೆ. ಅಕ್ರಮವಾಗಿ ಎಲೆಕ್ಟ್ರಾನಿಕ್ ಸೂಕ್ಷ್ಮ ಉಪಕರಣ ಖರೀದಿಸುತ್ತಿದ್ದ. ದೆಹಲಿ, ಹೈದರಾಬಾದ್‌ನ ಡೀಲರ್‌ಗಳಿಂದ ಅಕ್ರಮವಾಗಿ ಉಪಕರಣಗಳ ಖರೀದಿ ಮಾಡಲಾಗುತ್ತಿತ್ತು. ಮಹಮ್ಮದ್ ಅಜೀಮುದ್ದೀನ್ ಬಳಿ ಸಂಜು ಭಂಡಾರಿ ಇಲೆಕ್ಟ್ರಾನಿಕ್ ಉಪಕರಣ ಖರೀದಿಸುತ್ತಿದ್ದ. ಅಭ್ಯರ್ಥಿಗಳಿಂದ ಹಣ ಪಡೆದು ಬ್ಲೂಟೂತ್, ಸ್ಮಾರ್ಟ್ ವಾಚ್ ಪೂರೈಸುತ್ತಿದ್ದ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?
ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಪರೀಕ್ಷೆಯು ಕಳೆದ ಆಗಸ್ಟ್ 7ರಂದು ಗೋಕಾಕ್‌ನಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಸಿದ್ದಪ್ಪ ಎಂಬ ವ್ಯಕ್ತಿ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಹೊರಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಅಭ್ಯರ್ಥಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅಕ್ರಮ ಎಸಗಿರುವುದು ಖಚಿತವಾಗಿತ್ತು. ಅದರಂತೆ ಅಕ್ಟೋಬರ್ 22ರಂದು 9ಮಂದಿಯನ್ನು ಬಂಧಿಸಿದ್ದ ಪೊಲೀಸರು, ಅಕ್ಟೋಬರ್ 24ರಂದು ಮೂವರನ್ನು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT