ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ 
ರಾಜ್ಯ

ದೋಣಿಯಲ್ಲಿ ತೆರಳಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಸಿದ್ದರಾಮಯ್ಯ: ಶ್ವೇತ ಪತ್ರ ಹೊರಡಿಸಲು ಮಾಜಿ ಸಿಎಂ ಆಗ್ರಹ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ದರಾಮಯ್ಯ ಅವರು ದೋಣಿಯಲ್ಲಿ ತೆರಳಿ ಎಪ್ಸಿಲಾನ್ ವಿಲ್ಲಾ ಮತ್ತು ರೇನ್‌ಬೋ ಡ್ರೈವ್ ಲೇಔಟ್‌ಗೆ ಭೇಟಿ ನೀಡಿದರು.

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ದರಾಮಯ್ಯ ಅವರು ದೋಣಿಯಲ್ಲಿ ತೆರಳಿ ಎಪ್ಸಿಲಾನ್ ವಿಲ್ಲಾ ಮತ್ತು ರೇನ್‌ಬೋ ಡ್ರೈವ್ ಲೇಔಟ್‌ಗೆ ಭೇಟಿ ನೀಡಿದರು.

ಮೂರು ದಿನಗಳ ಹಿಂದೆ ವೈಟ್‌ಫೀಲ್ಡ್ ಸಮೀಪದ ಸಿದ್ದಾಪುರದ ಬಳಿ ವಿದ್ಯುತ್ ಅವಘಡದಿಂದ ಮೃತಪಟ್ಟ ಅಖಿಲಾ ಅವರ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಸದ್ಯ ಅಸ್ಥಿತ್ವದಲ್ಲಿರುವ ಬಸವರಾಜ ಬೊಮ್ಮಾಯಿ ಸರ್ಕಾರ ಪ್ರವಾಹದ ಹೊಣೆಯನ್ನು ಕಾಂಗ್ರೆಸ್ ಮೇಲೆ ಹೊರಿಸಲು ಪ್ರಯತ್ನಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಅತಿಕ್ರಮಣಗಳನ್ನು ಗುರುತಿಸಿ ತೆರವುಗೊಳಿಸಲು ಪ್ರಯತ್ನಿಸಲಾಗಿತ್ತು. ಆದರೆ ಮೂರು ವರ್ಷಗಳ ಹಿಂದೆ ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸರಕಾರ ಕ್ಷಿಪ್ರವಾಗಿ ಕಾರ್ಯ ನಿರ್ವಹಿಸಿದ್ದರೆ, ಹಾನಿಯನ್ನು ತಪ್ಪಿಸಬಹುದಿತ್ತು ಎಂದಿದ್ದಾರೆ.

ಮಳೆನೀರು ಚರಂಡಿಗಳ ಒತ್ತುವರಿ ತೆರವಿಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು. ಮುಂದಿನ ಸೋಮವಾರದಿಂದ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿರುವ ಅನಾಹುತಕ್ಕೆ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಹೋರಾಟ ಕೈಗೊಳ್ಳಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.

ಏತನ್ಮಧ್ಯೆ, ಔಟರ್ ರಿಂಗ್ ರೋಡ್ ಕಂಪನಿಗಳ ಸಂಘ ORRCA ಮಾಧ್ಯಮಗಳೊಂದಿಗೆ ಪತ್ರವನ್ನು ಹಂಚಿಕೊಂಡಿದ್ದು, ಸರ್ಕಾರಗಳು ಗುಂಡಿಗಳನ್ನು ಸರಿಪಡಿಸಲು ಮತ್ತು ಹೊರ ವರ್ತುಲ ರಸ್ತೆಯ ಪ್ರವಾಹವನ್ನು ತಡೆಯಲು ಮಾಡಿದ ಮನವಿಯನ್ನು ಹೇಗೆ ನಿರ್ಲಕ್ಷಿಸಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದಿದ್ದಾರೆ. 2017ರಲ್ಲಿಯೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಸಿದ್ದರಾಮಯ್ಯನವರೇ ಆಡಳಿತದ ಚುಕ್ಕಾಣಿ ಹಿಡಿದಿದ್ದು ಕುತೂಹಲ ಮೂಡಿಸಿದೆ ಎಂದು ಸದಸ್ಯರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!