ತೇಜಸ್ವಿ ಸೂರ್ಯ 
ರಾಜ್ಯ

ಕಾಂಗ್ರೆಸ್ ನವರು ಕಳಿಸಿದ್ದ ದೋಸೆ 24 ಗಂಟೆ ಕಳೆದರೂ ಬಂದಿಲ್ಲ, ಇದರಲ್ಲೂ ಹಗರಣ ನಡೆಸಿದ್ದಾರೆ: ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯ

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ನಿವಾಸಕ್ಕೆ ಕಾಂಗ್ರೆಸ್ ಪಕ್ಷದಿಂದ ದೋಸೆ ಕಳಿಸುವ ಅಭಿಯಾನಕ್ಕೆ ಸಂಸದರು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ನಿವಾಸಕ್ಕೆ ಕಾಂಗ್ರೆಸ್ ಪಕ್ಷದಿಂದ ದೋಸೆ ಕಳಿಸುವ ಅಭಿಯಾನಕ್ಕೆ ಸಂಸದರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, "ನನ್ನ ಮನೆಗೆ ಮಸಾಲೆ ದೋಸೆಯನ್ನು ಕಳಿಸುವುದಾಗಿ ನೆನ್ನೆ ಕಾಂಗ್ರೆಸ್ ಪಕ್ಷ ಘೋಷಿಸಿತ್ತು". ಈ ಘೋಷಣೆಯಾಗಿ 24 ಗಂಟೆಗಳು ಕಳೆದಿವೆ. ಆದರೆ ನನಗಿನ್ನೂ ದೋಸೆ ತಲುಪಿಲ್ಲ. ಕಾಂಗ್ರೆಸ್ ನವರು ಇದರಲ್ಲೂ ಹಗರಣ ನಡೆಸಿದ್ದಾರೆ. ದೋಸೆಯನ್ನು ಸರಿಯಾಗಿ ತಲುಪಿಸಲು ಸಾಧ್ಯವಾಗದವರು, ಒಳ್ಳೆಯ ಆಡಳಿತವನ್ನು ಜನರಿಗೆ ತಲುಪಿಸುವ ಹಗಲುಗನಸು ಕಾಣುತ್ತಿದ್ದಾರೆ" ಎಂದು ತೇಜಸ್ವಿ ಸೂರ್ಯ ಕಾಂಗ್ರೆಸ್ ಅಭಿಯಾನದ ಬಗ್ಗೆ ವ್ಯಂಗ್ಯವಾಡಿದ್ದಾರೆ. 

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದು ಹಲವು ಪ್ರದೇಶಗಳು ಜಲಾವೃತಗೊಂಡಿದ್ದ ವೇಳೆ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ತಿನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. 

ಜನರು ಸಂಕಷ್ಟ ಎದುರಿಸುತ್ತಿರಬೇಕಾದರೆ, ಸಂಸದರು ಈ ರೀತಿ ಹೋಟೆಲ್ ನಲ್ಲಿ ದೋಸೆ ತಿನ್ನುತ್ತಿರುವ ವಿಡಿಯೋವನ್ನು ಖಂಡಿಸಿದ್ದ ಕಾಂಗ್ರೆಸ್ ಪಕ್ಷ, ಸಂಸದರ ಮನೆಗೆ ದೋಸೆ ಕಳಿಸುವ ಮೂಲಕ ಪ್ರತಿಭಟನೆ ಮಾಡಿತ್ತು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT