ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ರಾಜ್ಯದ ಜನತೆಯ ತೆರಿಗೆ ಹಣದಲ್ಲಿ 'ಹಿಂದಿ ದಿವಸ' ಆಚರಿಸಬೇಡಿ: ಮುಖ್ಯಮಂತ್ರಿಗೆ ಹೆಚ್ ಡಿ ಕುಮಾರಸ್ವಾಮಿ ಪತ್ರದ ಮೂಲಕ ಆಗ್ರಹ

ಕರ್ನಾಟಕದಲ್ಲಿ ಹಿಂದಿ ದಿನ (Hindi Diwas)​ ಆಚರಿಸುವುದು ಬೇಡ, ಈ ಮೂಲಕ ಜನರ ತೆರಿಗೆ ಹಣವನ್ನು ನಿಷ್ಪ್ರಯೋಜಕಗೊಳಿಸುವುದು ಬೇಡ ಎಂದು  ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ದಿನ (Hindi Diwas)​ ಆಚರಿಸುವುದು ಬೇಡ, ಈ ಮೂಲಕ ಜನರ ತೆರಿಗೆ ಹಣವನ್ನು ನಿಷ್ಪ್ರಯೋಜಕಗೊಳಿಸುವುದು ಬೇಡ ಎಂದು  ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

ಸಾವಿರಾರು  ಭಾಷೆ, ಉಪ ಭಾಷೆಗಳನ್ನು ಹೊಂದಿರುವ ಸಾಮಾಜಿಕ, ಸಾಂಸ್ಕೃತಿಕವಾಗಿ ವೈವಿಧ್ಯತೆ ಹೊಂದಿರುವ ಭಾರತ ದೇಶದಲ್ಲಿ ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 14ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರವು ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ಹಿಂದಿ ದಿವಸ ಆಚರಣೆ ಮಾಡಬಾರದೆಂದು ಆಗ್ರಹಿಸುತ್ತೇನೆ’ ಎಂದು ಅವರು ಒತ್ತಾಯಿಸಿದ್ದಾರೆ.

ಹಿಂದಿ ದಿನ ಆಚರಣೆ: ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಜಾರಿಗೆ ತರಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವ್ಯೋಹರ್ ರಾಜೇಂದ್ರ ಸಿಂಹ ಅವರ 50ನೇ ಹುಟ್ಟುಹಬ್ಬವಾದ ಸೆಪ್ಟೆಂಬರ್ 14ರಂದು ಹಿಂದಿಯನ್ನು ಕೇಂದ್ರ ಸರ್ಕಾರದ ಆಡಳಿತ ಭಾಷೆಯಾಗಿ ಘೋಷಿಸಲಾಯಿತು. ವ್ಯೂಹರ್ ಸಿಂಹ ಅವರ ಸ್ಮರಣಾರ್ಥವಾಗಿ ಪ್ರತಿವರ್ಷ ಸೆಪ್ಟೆಂಬರ್ 14ರಂದು ‘ಹಿಂದಿ ದಿವಸ್’ ಆಚರಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT