ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯೋಪಾಧ್ಯಾಯ, ಕಂಪ್ಯೂಟರ್ ಆಪರೇಟರ್ ಬಂಧನ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ಶಾಲೆಯೊಂದರಲ್ಲಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯೋಪಾಧ್ಯಾಯ...

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ಶಾಲೆಯೊಂದರಲ್ಲಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಚೇತನ ರೆಡ್ಡಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂಗಮೇಶ ಅವರನ್ನು ಮಂಗಳವಾರ ಬಂಧಿಸಲಾಗಿದೆ.

ಮುಖ್ಯೋಪಾಧ್ಯಾಯ, ಕಂಪ್ಯೂಟರ್ ಆಪರೇಟರ್ ವಿರುದ್ಧ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಹಾಗೂ ಜಾತಿನಿಂದನೆ ಪ್ರಕರಣ ದಾಖಲಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚೇತನರೆಡ್ಡಿ ಹಾಗೂ ಸಂಗಮೇಶ ಅವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಶಾಲೆಯ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೋಷಕರು ಮತ್ತು ಗ್ರಾಮಸ್ಥರು ಸೋಮವಾರ ಶಾಲೆಗೆ ತೆರಳಿ ಮುಖ್ಯ ಶಿಕ್ಷಕ ಹಾಗೂ ಕಂಪ್ಯೂಟರ್ ಆಪರೇಟರ್ ಇಬ್ಬರಿಗೂ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಲಿಂಗ್ ಅವರು ಭೇಟಿ ನೀಡಿ ಪಾಲಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹೆಡ್ ಮಾಸ್ಟರ್ ಚೇತನ್‌ಕುಮಾರ್ ರೆಡ್ಡಿ ಮತ್ತು ಕಂಪ್ಯೂಟರ್ ಆಪರೇಟರ್ ಸಂಗಮೇಶ್ ಅವರನ್ನು ಬಂಧಿಸಲಾಗಿದೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಕೊಂಚಾವರಂನಲ್ಲಿ ಧರಣಿ ನಡೆಸಿದರು.

ಕಲಬುರಗಿ ಸಂಸದ ಡಾ.ಉಮೇಶ ಜಾಧವ್, ಜಿಲ್ಲಾಧಿಕಾರಿ ಯಶವಂತ್ ಗುರ್ಕಾರ್ ಮಂಗಳವಾರ ಕೊಂಚಾವರಂನ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಕೊಂಚಾವರಂನ ವಸತಿ ಶಾಲೆಗೆ ಮಹಿಳಾ ವಾರ್ಡನ್ ಹಾಗೂ ಮಹಿಳಾ ಕಂಪ್ಯೂಟರ್ ಆಪರೇಟರ್ ನೇಮಕ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸೂಚನೆ ನೀಡಿರುವುದಾಗಿ ಯಶವಂತ ಗುರ್ಕಾರ್ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಲಭ್ಯವಿಲ್ಲದಿದ್ದರೆ ಮಹಿಳಾ ಮುಖ್ಯೋಪಾಧ್ಯಾಯರು ಹಾಗೂ ಮಹಿಳಾ ಕಂಪ್ಯೂಟರ್ ಆಪರೇಟರ್ ಸೇವೆಯನ್ನು ಡೆಪ್ಯುಟೇಶನ್ ಆಧಾರದ ಮೇಲೆ ನೀಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ತಿಳಿಸಲಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT