ಸಂಸದ ತೇಜಸ್ವಿ ಸೂರ್ಯ 
ರಾಜ್ಯ

ಬೆಂಗಳೂರು: ಹೆಚ್ಚುವರಿ ಎಲೆಕ್ಟ್ರಿಕ್ ಬಸ್ ಗಳ ಪೂರೈಕೆಯಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಉತ್ತೇಜನ- ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಸಿಲ್ಕ್ ಬೋರ್ಡ್ ನಿಂದ ಮಾರತ್ ಹಳ್ಳಿಯವರೆಗೆ ಹೊಸ ಎಲೆಕ್ಟ್ರಿಕ್ ಬಸ್ ಗಳಲ್ಲಿ ಪ್ರಯಾಣಿಕರೊಂದಿಗೆ ಸಂಚರಿಸಿ ಅವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದರು.

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಸಿಲ್ಕ್ ಬೋರ್ಡ್ ನಿಂದ ಮಾರತ್ ಹಳ್ಳಿಯವರೆಗೆ ಹೊಸ ಎಲೆಕ್ಟ್ರಿಕ್ ಬಸ್ ಗಳಲ್ಲಿ ಪ್ರಯಾಣಿಕರೊಂದಿಗೆ ಸಂಚರಿಸಿ ಅವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದರು.

ಬಿಎಂಟಿಸಿ ಅಧಿಕಾರಿಗಳೊಂದಿಗೆ ಎಲೆಕ್ಟ್ರಿಕ್ ಬಸ್ ಗಳ ಪರಿಶೀಲನೆ ನಡೆಸಿ ಮಾತನಾಡಿದ ತೇಜಸ್ವಿ ಸೂರ್ಯ, ನಗರದ ವಾಹನ ದಟ್ಟಣೆ ತಗ್ಗಿಸಲು ಸಾರ್ವಜನಿಕ ಸಾರಿಗೆ ಅತ್ಯಂತ ಸುಗಮ ಸರಳ ಮಾರ್ಗವಾಗಿದೆ. ಸೀಟ್ ಗಳ ಲಭ್ಯತೆ ಹಾಗೂ ಸೂಕ್ತ ಸಮಯ ಪರಿಪಾಲನೆಯ ಗ್ಯಾರಂಟಿ ದೊರೆತರೆ ಇನ್ನೂ ಹೆಚ್ಚಿನ ಪರಿಣಾಮಕಾರಿ ಪ್ರಭಾವ ಬೀರಬಲ್ಲದು, 1.2 ಕೋಟಿ ಜನಸಂಖ್ಯೆಗೆ ಬಿಎಂಟಿಸಿಯು ಪ್ರಸ್ತುತ 6,500 ಬಸ್ ಗಳನ್ನು ಮಾತ್ರ ಹೊಂದಿದ್ದು,ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಬಸ್ ಗಳನ್ನು ನಗರದ ಜನಸಂಖ್ಯೆಗೆ ತಕ್ಕಂತೆ ಪೂರೈಸಲು ಸರ್ಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಫೇಮ್ ಯೋಜನೆಯಡಿ ಎಲೆಕ್ಟ್ರಿಕ್ ಬಸ್ ಗಳ ಪೂರೈಕೆ, ಬಳಕೆಗೆ ವ್ಯಾಪಕ ಉತ್ತೇಜನ ನೀಡುತ್ತಿದ್ದು, ಕೇವಲ 12 ತಿಂಗಳ ಅವಧಿಯಲ್ಲಿ 170ಕ್ಕೂ ಅಧಿಕ ಎಲೆಕ್ಟ್ರಿಕ್ ಬಸ್ ಗಳು ಈಗಾಗಲೇ ಕಾರ್ಯಾಚರಣೆಯಲ್ಲಿವೆ. ಫೇಮ್ -2 ಅನ್ವಯ ಸ್ಮಾರ್ಟ್ ಸಿಟಿ ಯೋಜನೆಯಡಿ 921 ಟಾಟಾ, 300 ಸ್ವಿಚ್ ಮೊಬಿಲಿಟಿ ಇ- ಬಸ್ ಗಳು ಮಂಜೂರಾಗಿದ್ದು, ಬಿಎಂಟಿಸಿ ವಾಹನಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಸಾರ್ವಜನಿಕ ಬಸ್ ಗಳಲ್ಲಿ  ಪ್ರಯಾಣಿಕರ ಸಂಖ್ಯೆ ಕೂಡಾ ಏರಿಕೆಯಾಗಲಿದೆ ಎಂದು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT