ಕಂದಾಯ ಸಚಿವ ಆರ್ ಅಶೋಕ್ 
ರಾಜ್ಯ

ಸದನ ಸ್ವಾರಸ್ಯ: ಅಶೋಕ್ ನೀನು ಕಬಡ್ಡಿ ಆಡ್ತಿದ್ದೆ ಅಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ

ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ- ಅಶೋಕ್ ನಡುವೆ ಸ್ವಾರಸ್ಯಕರವಾದ ಮಾತುಕತೆ ನಡೆಯಿತು.

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ- ಅಶೋಕ್ ನಡುವೆ ಸ್ವಾರಸ್ಯಕರವಾದ ಮಾತುಕತೆ ನಡೆಯಿತು.

ವಿಧಾನಸಭೆಯಲ್ಲಿ ಮಳೆ ಹಾನಿ ಕುರಿತಾಗಿ ನಿಯಮ 69 ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಇಂತಹದೊಂದು ಸ್ವಾರಸ್ಯಕರ ಮಾತುಕತೆ ನಡೆಯಿತು.

ಮಳೆಯಿಂದ ಒಟ್ಟು 24 ಸಾವಿರ ಮನೆಗಳು ಹಾನಿಗೀಡಾಗಿವೆ. 7647 ಕೋಟಿ 13 ಲಕ್ಷ ನಷ್ಟ ಹೇಳಿದ್ದೀರಿ. ಎಸ್ ಡಿ ಆರ್ ಎಫ್ ನಾರ್ಮ್ಸ್ ಪ್ರಕಾರ 1012 ಕೋಟಿ 50 ಲಕ್ಷ ಕೇಂದ್ರದ ಬಳಿ ಪರಿಹಾರ ಕೇಳಿದ್ದೀರಿ. ಆದರೆ ಕೇಂದ್ರ ಇಲ್ಲಿಯವರೆಗೂ ಒಂದೇ ಒಂದು ಪೈಸೆ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಈ ವೇಳೆ ಕಂದಾಯ ಸಚಿವ ಆರ್. ಅಶೋಕ್ ಎದ್ದು ನಿಂತರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಅಶೋಕ್ ನಿಲ್ಲಬೇಡಿ, ಯಾಕೆ ವ್ಯಾಯಾಮ ಮಾಡ್ತೀರಿ? ನಿನ್ನ ಎನರ್ಜಿ ಚೆನ್ನಾಗಿ ಇದೆ. ನೀನು ದೈಹಿಕವಾಗಿ ಗಟ್ಟಿ ಇದ್ದೀಯಾ, ಕಬಡ್ಡಿ ಆಡ್ತಿದ್ದೆ ಅಲ್ವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇದಕ್ಕೆ ಮರುತ್ತರ ನೀಡಿದ ಸಚಿವ ಅಶೋಕ್, ಹೌದು 20 ವರ್ಷ ಆಡಿದ್ದೇನೆ ಎಂದರು. '"ನಾನು ಹೈಸ್ಕೂಲ್ ದಿನದಲ್ಲಿ ಆಡುತ್ತಿದ್ದೆ. ಆಮೇಲೆ ಬಿಟ್ಟೆ. ಆಮೇಲೆ ಆಡೋಕೆ ಆಗ್ಲೆ ಇಲ್ಲ. ಈಗ ಯಾವ ಆಟ ಆಡೋಕು ಆಗೋದಿಲ್ಲ ಎಂದರು ಸಿದ್ದರಾಮಯ್ಯ. ಕಬ್ಬಡಿ ಆಡಿದರೆ ಶುಗರ್ ಬಿಪಿ ಬರಲ್ಲ ಸರ್ ಎಂದು ಆರ್. ಅಶೋಕ್ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT