ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ರಾಮಮಂದಿರದ ಮಾದರಿ 
ರಾಜ್ಯ

ರಾಮ ಮಂದಿರ ಉದ್ಘಾಟನೆಗೆ ಮುನ್ನ 'ರಥ ಯಾತ್ರೆ' ಕೈಗೊಳ್ಳಬೇಕು: ಉಡುಪಿ ಪೇಜಾವರ ಮಠಾಧೀಶ ಒತ್ತಾಯ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಿಂದ ಕಾಶ್ಮೀರದವರೆಗೆ ‘ರಥಯಾತ್ರೆ’ ನಡೆಸಬೇಕೆಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ಹಾಗೂ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥರು ಪ್ರಸ್ತಾವನೆ ಮುಂದಿಟ್ಟಿದ್ದಾರೆ. 

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಿಂದ ಕಾಶ್ಮೀರದವರೆಗೆ ‘ರಥಯಾತ್ರೆ’ ನಡೆಸಬೇಕೆಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ಹಾಗೂ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥರು ಪ್ರಸ್ತಾವನೆ ಮುಂದಿಟ್ಟಿದ್ದಾರೆ. 

ನಿನ್ನೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರನ್ನು ಆಕರ್ಷಿಸುವುದು ಯಾತ್ರೆಯ ಉದ್ದೇಶವಾಗಿದೆ. ಅಯೋಧ್ಯೆಯ ವಿಮೋಚನೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅನೇಕ ಜನರಿದ್ದಾರೆ. ಯಾತ್ರೆಯ ಸಂದರ್ಭದಲ್ಲಿ ಅವರನ್ನೂ ನೆನಪಿಸಿಕೊಳ್ಳಬೇಕು ಎಂದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶದ ಮೂಲೆ ಮೂಲೆಗಳಿಂದ ದೇಣಿಗೆ ಹರಿದು ಬರುತ್ತಿದೆ. ಪ್ರತಿ ವರ್ಷ ಸುಮಾರು 100 ಕೋಟಿ ರೂಪಾಯಿ ದೇಣಿಗೆ ಪಡೆದು ವ್ಯವಸ್ಥಿತವಾಗಿ ಹಣ ಬಳಕೆ ಮಾಡಲಾಗುತ್ತಿದೆ. ರಾಮ ಮಂದಿರ ಯೋಜನೆಗೆ ಆರಂಭದಲ್ಲಿ 400 ಕೋಟಿ ರೂಪಾಯಿ ಯೋಜನೆ ಹಾಕಲಾಗಿತ್ತು. ಆದರೆ ಈಗ ವೆಚ್ಚ ಹೆಚ್ಚಿದ್ದು, ಪ್ರಸ್ತುತ ಅಂದಾಜಿನ ಪ್ರಕಾರ ನಿರ್ಮಾಣಕ್ಕೆ ಸುಮಾರು 1,300 ಕೋಟಿ ರೂಪಾಯಿ ಬೇಕಾಗಬಹುದು ಎಂದರು. 

ರಾಮಾಯಣದಲ್ಲಿ ಹನುಮಂತನ ಪಾತ್ರ ಬಹುಮುಖ್ಯವಾಗಿದ್ದು, ಹನುಮಂತನ ನಾಡಾಗಿರುವ ಕರ್ನಾಟಕಕ್ಕೆ ರಾಮಮಂದಿರಕ್ಕೂ ವಿಶೇಷ ಸಂಬಂಧವಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದ್ದು, ಸಂಪರ್ಕವನ್ನು ಅಖಂಡವಾಗಿಡಲು ರಾಜ್ಯದಿಂದ ರಾಮಮಂದಿರಕ್ಕೆ ‘ಸ್ವರ್ಣ ಶಿಖರ’ (ಚಿನ್ನದ ಶಿಖರ) ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT