ಡಾ.ಸ್ವರ್ಣಲತಾ 
ರಾಜ್ಯ

ನಟಿ ಶ್ರೀಲೀಲಾ ತಾಯಿ ವಿರುದ್ಧ ಎಫ್ಐಆರ್: ಡಾ.ಸ್ವರ್ಣಲತಾ ಪರಾರಿ; ಬಂಧನಕ್ಕಾಗಿ ಬಲೆ ಬೀಸಿದ ಪೊಲೀಸರು

ಖ್ಯಾತ ರಾಜಕಾರಣಿಯೊಬ್ಬರಿಗೆ ಅಲಯನ್ಸ್ ಯೂನಿವರ್ಸಿಟಿಯ ವಿವಾದಿತ ಆಸ್ತಿ ಮಾರಾಟ ಮಾಡಲು ಯತ್ನಿಸಿ, ಯೂನಿವರ್ಸಿಟಿಯಲ್ಲಿ ಗುಂಪು ಕಟ್ಟಿಕೊಂಡು ಬಂದು ಗಲಾಟೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್​ವುಡ್​ ಸ್ಟಾರ್​ ನಟಿ ಶ್ರೀಲೀಲಾ ಅವರ ತಾಯಿ ಸ್ವರ್ಣಲತಾ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಆನೇಕಲ್: ಖ್ಯಾತ ರಾಜಕಾರಣಿಯೊಬ್ಬರಿಗೆ ಅಲಯನ್ಸ್ ಯೂನಿವರ್ಸಿಟಿಯ ವಿವಾದಿತ ಆಸ್ತಿ ಮಾರಾಟ ಮಾಡಲು ಯತ್ನಿಸಿ, ಯೂನಿವರ್ಸಿಟಿಯಲ್ಲಿ ಗುಂಪು ಕಟ್ಟಿಕೊಂಡು ಬಂದು ಗಲಾಟೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್​ವುಡ್​ ಸ್ಟಾರ್​ ನಟಿ ಶ್ರೀಲೀಲಾ ಅವರ ತಾಯಿ ಸ್ವರ್ಣಲತಾ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ನೂರಾರು ಕೋಟಿ ರೂಪಾಯಿ ವ್ಯವಹಾರ ಮಾಡಲು ಹೋದ ಸ್ವರ್ಣಲತಾ ಅವರು ಇದೀಗ ಪೊಲೀಸ್​ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಸ್ವರ್ಣಲತಾ ಅವರು ಖ್ಯಾತ ರಾಜಕಾರಣಿಗೆ ಅಲಯನ್ಸ್ ವಿವಿ ಮಾರಾಟ ಮಾಡಿಸಲು ಮುಂದಾಗಿದ್ದರು.

ಈಗಾಗಲೇ ಯೂನಿವರ್ಸಿಟಿಯಿಂದ ಹೊರಬಿದ್ದಿರುವ ಮಧುಕರ್ ಅಂಗೂರ್​ರಿಂದ ಯುನಿವರ್ಸಿಟಿ ಮಾರಾಟಕ್ಕೆ ಸ್ವರ್ಣಲತಾ ಡೀಲ್ ಕುದುರಿಸಿದ್ದರು. ಆದ್ರೆ, ಸೆಷನ್ಸ್ ಕೋರ್ಟ್ ಹಾಗೂ ಹೈಕೋರ್ಟ್ ಆದೇಶದ ಮೇರೆಗೆ ಮಧುಕರ್​ರನ್ನು ಯೂನಿವರ್ಸಿಟಿಯಿಂದ ಹೊರಹಾಕಲಾಗಿದೆ

ಮಧುಕರ್ ಅಂಗೂರ್ ಅವರಿಂದ ಯುನಿವರ್ಸಿಟಿ ಮಾರಾಟಕ್ಕೆ ಸ್ವರ್ಣಲತಾ ಡೀಲ್ ಕುದುರಿಸಿದ್ದರು ಎಂದು ಹೇಳಲಾಗಿದ್ದು, ಮಧುಕರ್ ಮತ್ತು ಸ್ವರ್ಣಲತಾ ಗೂಂಡಾಗಳ ಜೊತೆ ವಿವಿಗೆ ನುಗ್ಗಿ ಸಿಬ್ಬಂದಿಗೆ ಮತ್ತು ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ. ಸೆ.10ರಂದು ಬಂದೂಕು ಹಿಡಿದ ಗೂಂಡಾಗಳ ಜೊತೆ ಸ್ವರ್ಣಲತಾ ವಿವಿಗೆ ನುಗ್ಗಿದ್ದರು ಎನ್ನಲಾಗುತ್ತಿದೆ.

ಈ ಕುರಿತು ಆನೇಕಲ್ ಪೊಲೀಸ್ ಠಾಣೆಗೆ ದೂರು ನೀಡಿರುವ ವಿವಿ ರಿಜಿಸ್ಟಾರ್ ಡಾ. ನಿವೇದಿತಾ ಮಿಶ್ರಾ, ಸೆ.10 ರಂದು ಸ್ವರ್ಣಲತಾ ಮತ್ತು ಮಧುಕರ್ ಅಂಗೂರು ಜೊತೆಯಾಗಿ ಗೂಂಡಾಗಳ ಜೊತೆ ವಿವಿಗೆ ನುಗ್ಗಿದ್ದಾರೆ.

ಗೂಂಡಾಗಳ ಬಳಿ ಬಂದೂಕು ಕೂಡ ಇದ್ದವು. ವಿವಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಹೆದರಿಸುವಂತಹ ಮತ್ತು ಬಂದೂಕಿನಿಂದ ಶೂಟ್ ಮಾಡುವುದಾಗಿ ಹೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ಮಧುಕರ್ ಬಂಧನವಾಗಿದ್ದು, ಆರೋಪಿ ನಂಬರ್ 2 ಆಗಿರುವ ಡಾ.ಸ್ವರ್ಣಲತಾ ಮಾತ್ರ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT